ಬೊನೆ , ಅಯೋವಾ( ಅಮೇರಿಕಾ): ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ ಸಚಿವರು ಹೊಸದಾಗಿ ಆವಿಷ್ಕಾರಗೊಂಡಿರುವ ಯಂತ್ರೋಪಕರಣಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಕೃಷಿಯನ್ನು ಸುಸ್ಥಿರ ಹಾಗೂ ಲಾಭದಾಯಕವನ್ನಾಗಿಸಬೇಕಿದೆ. ಶ್ರಮ ಮತ್ತು ವೆಚ್ಚ ಕಡಿತಗೊಳಿಸಿ ಉತ್ಪಾದನೆ ಹೆಚ್ಚಿಸಲು ಇಂತಹ ಆಧುನಿಕ ಯಂತ್ರೋಪಕರಣಗಳ ಬಳಗೆ ಸಹಕಾರಿಯಾಗಲಿದೆ ಎಂದು ಸಚಿವ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.
ಈ ಕೃಷಿ ಯಂತ್ರೋಪಕರಣಗಳ ಪ್ರದರ್ಶನದಲ್ಲಿ ಕೃಷಿ ಸಚಿವರು ಪ್ರಮುಖವಾಗಿ ರೋಬೋಟಿಕ್ ಟೆಕ್ನಾಲಜಿ, ಕೃತಕ ಬುದ್ಧಿಮತ್ತೆಯಿಂದ ಚಲಿಸಲ್ಪಡುವ ಯಂತ್ರಗಳನ್ನು ಗಮನಿಸಿ ಮಾಹಿತಿ ಪಡೆದರು.
ರಾಜ್ಯದ ವಿಭಿನ್ನ ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗುವ ಹಲುವು ಬೆಳೆಗಳ ಬಿತ್ತನೆ , ನಿರ್ವಹಣೆ ಕಟಾವಿಗೂ ನೆರವಾಗುವ ಹೊಸ ಯಂತ್ರಗಳು ಆವಿಷ್ಕಾರ ಗೊಂಡಿರುವುದನ್ನು ಗಮನಿಸಿದ ಸಚಿವರು ಮೆಸ್ಸೆ ಫರ್ಗೂಸನ್, ಜಾನ್ ಡೀರ್,ಕುಬೋಟಾ,
ಅಗ್ರಿ ಏರೋ ಸ್ಪೇಸ್ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು.
ಈ ದೊಡ್ಡ ಯಂತ್ರಗಳನ್ನು ಕರ್ನಾಟಕದಲ್ಲಿಯೇ ಉತ್ಪಾದನೆ ಮಾಡಲು ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು .
ಹಾಗಾಗಿ ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಸಚಿವ ಎನ್ ಚಲುವರಾಯಸ್ವಾಮಿ ಉದ್ಯಮಿಗಳನ್ನು ಆಹ್ವಾನಿಸಿದರು.
ಇದರ ಜೊತೆಗೆ ಕೃಷಿ ಸಚಿವರು ಬಿಡುವು ಮಾಡಿಕೊಂಡು ಅಮೇರಿಕಾದ ಕೃಷಿ ಕ್ಷೇತ್ರಗಳಿಗೂ ಭೇಟಿ ನೀಡಿ ಅಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನಗಳನ್ನು ಪರಿಶೀಲಿಸಿದರು.
ಕೃಷಿ ಇಲಾಖೆ ಕಾರ್ಯದರ್ಶಿ ವಿ ಅನ್ಬುಕುಮಾರ್, ಅಪರ ಕೃಷಿ ನಿರ್ದೇಶಕರಾದ ವೆಂಕಟ ರಮಣ ರೆಡ್ಡಿ,ಕೆಪೆಕ್ ಅಧ್ಯಕ್ಷರಾದ ಹರೀಶ್ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರಾದ ಬಂಥನಾಳ್ ,ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಸಚಿವರೊಂದಿಗೆ ಕೃಷಿ ಯಂತ್ರೋಪಕರಣ ಪ್ರದರ್ಶನ ಮೇಳದಲ್ಲಿ ಭಾಗವಹಿಸಿದ್ದರು.
ಬೃಹತ್ ವಸ್ತು ಪ್ರದರ್ಶನ
ಅಮೇರಿಕಾ ದೇಶದ ಅಯೋವಾ ಪ್ರಾತ್ಯದ ಬೊನೆ ನಗರದಲ್ಲಿ ಏರ್ಪಡಿಸಿರುವ ಕೃಷಿ ಅಭಿವೃದ್ಧಿ ಪ್ರದರ್ಶನ ಅಮೇರಿಕಾದಲ್ಲಿ ನಡೆಯುವ ವಿಶ್ವದ ಅತೀ ದೊಡ್ಡ ಕೃಷಿ ಪ್ರದರ್ಶನಗಳಲ್ಲಿ ಒಂದಾಗಿದೆ.
ವಿಶ್ವದ ಅನೇಕ ಕೃಷಿ ಯಂತ್ರೋಪಕರಣಗಳ ಉತ್ಪಾದನಾ ಸಂಸ್ಥೆಗಳು ಇದರಲ್ಲಿ ಭಾಗವಹಿಸುತ್ತವೆ .ಪ್ರತಿ ವರ್ಷ ಹೊಸ ಆವಿಷ್ಕಾರಗಳು ಇಲ್ಲಿ ಪರಿಚಯಿಸಲ್ಪಡುತ್ತವೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…