ದೇಶ- ವಿದೇಶ

ಅಹಮದಾಬಾದ್‌ ವಿಮಾನ ಪತನ : 242 ಪ್ರಯಾಣಿಕರ ದುರ್ಮರಣ

ಸಾವು-ನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಪತನವಾದ ಏರ್‌ ಇಂಡಿಯಾ ವಿಮಾನದಲ್ಲಿದ್ದ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಹಿತ 242ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದು ಪೊಲೀಸ್‌ ಕಮಿಷನರ್‌ ಜಿ.ಎಸ್‌ ಮಲಿಕ್‌ ಅವರು ಅಸೋಸಿಯೇಟೆಡ್‌ ಪ್ರೆಸ್‌ (ಎಪಿ)ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ವಿಮಾನವು ಬಿ.ಜೆ ವೈದ್ಯಕೀಯ ಕಾಲೇಜಿನ ವೈದ್ಯರ ವಸತಿ ಸಮುಚ್ಚಯ ಕಟ್ಟಡದಲ್ಲಿ ಪತನವಾದರಿಂದ ಅಲ್ಲಿಯೂ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಮಿಲಿಟರಿ ಅಧಿಕಾರಿಗಳ ಆಘಾತ
ಜೀವಂತವಾಗಿ ಯಾರನ್ನೂ ನೋಡಿಲ್ಲ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಮಿಲಿಟರಿ ಅಧಿಕಾರಿಗಳ ಆಘಾತ ವ್ಯಕ್ತಪಡಿಸಿದ್ದಾರೆ.

ತನಿಖೆ ಹೊಣೆ ಎಎಐಬಿ ಹೆಗಲಿಗೆ

ಏರ್‌ ಇಂಡಿಯಾ ವಿಮಾನ AI-17 ಅಪಘಾತ ಕುರಿತು ವಿಮಾನ ಅಪಘಾತ ತನಿಖಾ ಸಂಸ್ಥೆ(ಎಎಐಬಿ) ತನಿಖೆ ಆರಂಭಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಸಿದ ಬೋಯಿಂಗ್‌ ಕಂಪನಿ ಷೇರು ಮೌಲ್ಯ
ಇನ್ನೂ ವಿಮಾನ ದುರಂತ ಸಂಭವಿಸಿದ ಬೆನ್ನಲ್ಲೇ, ಎಲ್ಲಾ ಬೋಯಿಂಗ್‌ ಕಂಪನಿಯ ಷೇರುಗಳು ಶೇ8ರಷ್ಟು ಕುಸಿತ ಕಂಡಿವೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

2 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

3 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

3 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

3 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

4 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

4 hours ago