ದೇಶ- ವಿದೇಶ

ಅಹಮದಾಬಾದ್‌ ವಿಮಾನ ದುರಂತ ಪ್ರಕರಣ: ಮೃತರ ಸಂಖ್ಯೆ 274ಕ್ಕೆ ಏರಿಕೆ

ಅಹಮದಾಬಾದ್:‌ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ.

ವಿಮಾನದಲ್ಲಿದ ಏಕೈಕ ಭಾರತೀಯ ಮೂಲದ ಬ್ರಿಟಿಷ್‌ ಪ್ರಜೆ ವಿಶ್ವಾಸ್‌ ಕುಮಾರ್‌ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾಯಿ ಕೂಡ ಸೇರಿದ್ದಾರೆ.

ಈ ಮಧ್ಯೆ ಗುರುವಾರ ರಾತ್ರಿ ಒಂದು ಬ್ಲ್ಯಾಕ್‌ ಬಾಕ್ಸ್‌ವೊಂದನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್‌ ಬಾಕ್ಸ್‌ ಮತ್ತು ಡಿಜಿಟಲ್‌ ವಿಡಿಯೋ ರೆಕಾರ್ಡರ್‌ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.

ಇನ್ನು ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದನ್ನು ಪತ್ತೆಹಚ್ಚುವುದಕ್ಕಾಗಿ ನಾಗರಿಕ ವಿಮಾನಯಾನ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

4 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

4 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

4 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

4 hours ago