ದೇಶ- ವಿದೇಶ

ಅಹಮದಾಬಾದ್‌ ವಿಮಾನ ದುರಂತ ಪ್ರಕರಣ: ಪ್ರಾಥಮಿಕ ತನಿಖಾ ವರದಿ ಸಲ್ಲಿಕೆ

ಅಹಮದಾಬಾದ್:‌ ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗುಜರಾತ್‍ನ ಅಹಮದಾಬಾದ್‍ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‍ಗಳು ಸ್ಥಗಿತಗೊಂಡಿವೆ. ಆ ನಂತರ ವಿಮಾನ ಪತನವಾಗಿದೆ ಎಂದು ಬಹಿರಂಗಗೊಂಡಿದೆ.

ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್‍ಗಳ ಕಾಕ್‍ಪಿಟ್ ಧ್ವನಿ ರೆಕಾರ್ಡಿಂಗ್ ಡೇಟಾವನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ.

ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್‍ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿದಿದೆ.

ವಿಮಾನದ ಎಂಜಿನ್‍ಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಎಎಐಬಿ ಗಮನಸೆಳೆದಿದೆ. ಆದಾಗ್ಯೂ, ತನಿಖಾ ಬ್ಯೂರೋ, ಈ ವರದಿ ಪ್ರಾಥಮಿಕ ಎಂದು ಹೇಳಿದೆ.

ಪ್ರಸ್ತುತ, ಅಪಘಾತದ ವಿವರವಾದ ತನಿಖೆ ನಡೆಯುತ್ತಿದೆ.ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್‍ಗಳ ಇಂಧನ ಸ್ವಿಚ್‍ಗಳು ಇದ್ದಕ್ಕಿದ್ದಂತೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್‍ಗಳಿಗೆ ಇಂಧನ ಬರುವುದು ನಿಂತುಹೋಗಿದೆ.

ಟೇಕ್ ಆಫ್ ಆದ 3 ಸೆಕೆಂಡ್‍ಗಳ ನಂತರ, ಎರಡೂ ಇಂಜಿನ್‍ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್‍ಗಳು ರನ್‌ನಿಂದ ಕಟ್‍ಆಫ್‍ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಬ್ಬ ಪೈಲಟ್ ನೀವು ಏಕೆ ಕಟ್ ಆಫ್ ಮಾಡಿದ್ರಿ? ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ನಾನು ಮಾಡಿಲ್ಲ? ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

11 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

11 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

11 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

13 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

13 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

13 hours ago