plane crash
ಅಹಮದಾಬಾದ್: ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್ಗಳು ಸ್ಥಗಿತಗೊಂಡಿವೆ. ಆ ನಂತರ ವಿಮಾನ ಪತನವಾಗಿದೆ ಎಂದು ಬಹಿರಂಗಗೊಂಡಿದೆ.
ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್ಗಳ ಕಾಕ್ಪಿಟ್ ಧ್ವನಿ ರೆಕಾರ್ಡಿಂಗ್ ಡೇಟಾವನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ.
ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿದಿದೆ.
ವಿಮಾನದ ಎಂಜಿನ್ಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಎಎಐಬಿ ಗಮನಸೆಳೆದಿದೆ. ಆದಾಗ್ಯೂ, ತನಿಖಾ ಬ್ಯೂರೋ, ಈ ವರದಿ ಪ್ರಾಥಮಿಕ ಎಂದು ಹೇಳಿದೆ.
ಪ್ರಸ್ತುತ, ಅಪಘಾತದ ವಿವರವಾದ ತನಿಖೆ ನಡೆಯುತ್ತಿದೆ.ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್ಗಳ ಇಂಧನ ಸ್ವಿಚ್ಗಳು ಇದ್ದಕ್ಕಿದ್ದಂತೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್ಗಳಿಗೆ ಇಂಧನ ಬರುವುದು ನಿಂತುಹೋಗಿದೆ.
ಟೇಕ್ ಆಫ್ ಆದ 3 ಸೆಕೆಂಡ್ಗಳ ನಂತರ, ಎರಡೂ ಇಂಜಿನ್ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್ಗಳು ರನ್ನಿಂದ ಕಟ್ಆಫ್ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಬ್ಬ ಪೈಲಟ್ ನೀವು ಏಕೆ ಕಟ್ ಆಫ್ ಮಾಡಿದ್ರಿ? ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ನಾನು ಮಾಡಿಲ್ಲ? ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ.
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…