plane crash
ಅಹಮದಾಬಾದ್: ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್ಗಳು ಸ್ಥಗಿತಗೊಂಡಿವೆ. ಆ ನಂತರ ವಿಮಾನ ಪತನವಾಗಿದೆ ಎಂದು ಬಹಿರಂಗಗೊಂಡಿದೆ.
ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್ಗಳ ಕಾಕ್ಪಿಟ್ ಧ್ವನಿ ರೆಕಾರ್ಡಿಂಗ್ ಡೇಟಾವನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ.
ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿದಿದೆ.
ವಿಮಾನದ ಎಂಜಿನ್ಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಎಎಐಬಿ ಗಮನಸೆಳೆದಿದೆ. ಆದಾಗ್ಯೂ, ತನಿಖಾ ಬ್ಯೂರೋ, ಈ ವರದಿ ಪ್ರಾಥಮಿಕ ಎಂದು ಹೇಳಿದೆ.
ಪ್ರಸ್ತುತ, ಅಪಘಾತದ ವಿವರವಾದ ತನಿಖೆ ನಡೆಯುತ್ತಿದೆ.ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್ಗಳ ಇಂಧನ ಸ್ವಿಚ್ಗಳು ಇದ್ದಕ್ಕಿದ್ದಂತೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್ಗಳಿಗೆ ಇಂಧನ ಬರುವುದು ನಿಂತುಹೋಗಿದೆ.
ಟೇಕ್ ಆಫ್ ಆದ 3 ಸೆಕೆಂಡ್ಗಳ ನಂತರ, ಎರಡೂ ಇಂಜಿನ್ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್ಗಳು ರನ್ನಿಂದ ಕಟ್ಆಫ್ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಬ್ಬ ಪೈಲಟ್ ನೀವು ಏಕೆ ಕಟ್ ಆಫ್ ಮಾಡಿದ್ರಿ? ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ನಾನು ಮಾಡಿಲ್ಲ? ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…