plane crash
ಅಹಮದಾಬಾದ್: ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್ಗಳು ಸ್ಥಗಿತಗೊಂಡಿವೆ. ಆ ನಂತರ ವಿಮಾನ ಪತನವಾಗಿದೆ ಎಂದು ಬಹಿರಂಗಗೊಂಡಿದೆ.
ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್ಗಳ ಕಾಕ್ಪಿಟ್ ಧ್ವನಿ ರೆಕಾರ್ಡಿಂಗ್ ಡೇಟಾವನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ.
ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿದಿದೆ.
ವಿಮಾನದ ಎಂಜಿನ್ಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಎಎಐಬಿ ಗಮನಸೆಳೆದಿದೆ. ಆದಾಗ್ಯೂ, ತನಿಖಾ ಬ್ಯೂರೋ, ಈ ವರದಿ ಪ್ರಾಥಮಿಕ ಎಂದು ಹೇಳಿದೆ.
ಪ್ರಸ್ತುತ, ಅಪಘಾತದ ವಿವರವಾದ ತನಿಖೆ ನಡೆಯುತ್ತಿದೆ.ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್ಗಳ ಇಂಧನ ಸ್ವಿಚ್ಗಳು ಇದ್ದಕ್ಕಿದ್ದಂತೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್ಗಳಿಗೆ ಇಂಧನ ಬರುವುದು ನಿಂತುಹೋಗಿದೆ.
ಟೇಕ್ ಆಫ್ ಆದ 3 ಸೆಕೆಂಡ್ಗಳ ನಂತರ, ಎರಡೂ ಇಂಜಿನ್ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್ಗಳು ರನ್ನಿಂದ ಕಟ್ಆಫ್ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಬ್ಬ ಪೈಲಟ್ ನೀವು ಏಕೆ ಕಟ್ ಆಫ್ ಮಾಡಿದ್ರಿ? ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ನಾನು ಮಾಡಿಲ್ಲ? ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…