ಅಹಮದಾಬಾದ್: ಗುಜರಾತ್ ಎಟಿಎಸ್ ಪ್ರಮುಖ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ವಿನಿಮಯದ ಸಮಯದಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ.
ಭಯೋತ್ಪಾದಕ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ನ ಸುಂದೌಯ್ನಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮೂವರು ವ್ಯಕ್ತಿಗಳನ್ನು ಬಂಧಿಸಿದೆ.
ಆರೋಪಿಗಳು ಕಳೆದ ಒಂದು ವರ್ಷದಿಂದ ಕಣ್ಗಾವಲಿನಲ್ಲಿದ್ದರು. ಎಟಿಎಸ್ ಪ್ರಕಾರ, ಈ ಮೂವರು ಶಸ್ತ್ರಾಸ್ತ್ರಗಳನ್ನು ಪೂರೈಸುವಾಗ ಬಂಧಿಸಲ್ಪಟ್ಟವರು ಹಾಗೂ ದೇಶದ ವಿವಿಧ ಭಾಗಗಳಲ್ಲಿ ಭೈಯೋತ್ಪಾದಕ ದಾಳಿಗಳನ್ನು ನಡೆಸಲು ಯೋಜಿಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಬಂಧಿತ ಆರೋಪಿಗಳನ್ನು ಡಾ.ಅಹಮ್ಮದ್ ಮೊಹಿಯುದ್ದೀನ್ ಸೈಯದ್, ಮೊಹಮ್ಮದ್ ಸುಹೇಲ್ ಹಾಗೂ ಆಜಾದ್ ಎಂದು ಗುರುತಿಸಲಾಗಿದೆ. ಬಂಧಿತ ಮೂವರಲ್ಲಿ ಇಬ್ಬರು ಉತ್ತರ ಪ್ರದೇಶದ ನಿವಾಸಿಗಳು ಹಾಗೂ ಓರ್ವ ಆಂಧ್ರಪ್ರದೇಶದವರು ಎಂಬ ಮಾಹಿತಿ ಲಭ್ಯವಾಗಿದೆ.
ಬಂಧಿತ ಆರೋಪಿಗಳಿಂದ ಎರಡು ಪಿಸ್ತೂಲ್ಗಳು, ಒಂದು ಬೆರೆಟ್ಟಾ ಪಿಸ್ತೂಲ್, 30 ಜೀವಂತ ಕಾಟ್ರಿಡ್ಜ್ಗಳು ಹಾಗೂ 4 ಲೀಟರ್ ಕ್ಯಾಸ್ಟಲ್ ಆಯಿಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…