ದೇಶ- ವಿದೇಶ

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ ತಂತ್ರಜ್ಞಾನ, ಸಾಮಾಜಿಕ ಜಾಗೃತಿ ಹಾಗೂ ಭಾರತದ ಸಾಂಸ್ಕೃತಿಕ ಪರಂಪರೆಯ ಕುರಿತು ಆಲೋಚನೆಗಳನ್ನು ಹಂಚಿಕೊಂಡರು.

ಎಐ ಇಂಪ್ಯಾಕ್ಟ್‌ ಶೃಂಗಸಭೆ 2026ರ ಬಗ್ಗೆ ಮಾತನಾಡುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಭೆಯಲ್ಲಿ ಜಾಗತಿಕ ನಾಯಕರು ಮತ್ತು ತಂತ್ರಜ್ಞಾನ ಸಿಇಓಗಳನ್ನು ಭೇಟಿಯಾದ ಬಗ್ಗೆ ಹೇಳಿದರು.

ಶೃಂಗಸಭೆಯ ಪ್ರದರ್ಶನದಲ್ಲಿ ನಾನು ವಿಶ್ವ ನಾಯಕರಿಗೆ ಅಸಂಖ್ಯಾತ ವಿಷಯಗಳನ್ನು ತೋರಿಸಿದೆ. ಪ್ರಾಣಿಗಳ ಚಿಕಿತ್ಸೆಯಲ್ಲಿ ಎಐ ಹೇಗೆ ಸಹಾಯ ಮಾಡುತ್ತದೆ. ರೈತರು ದಿನದ 24 ಗಂಟೆಯೂ ಎಐ ನೆರವಿನ ಸಹಾಯದಿಂದ ತಮ್ಮ ಡೈರಿ ಮತ್ತು ಜಾನುವಾರುಗಳನ್ನು ಹೇಗೆ ಮೇಲ್ವಿಚಾರಣೆ ಮಾಡಬಹುದು ಎಂಬುದನ್ನು ಶೃಂಗಸಭೆಯು ಪ್ರದರ್ಶಿಸಿತು ಎಂದು ಹೇಳಿದರು.

ಭಾರತೀಯ ತಯಾರಕರು ಮತ್ತು ಸ್ಮಾರ್ಟ್‌ ಆಪ್‌ಗಳು ಶೂನ್ಯ ದೋಷ, ಉನ್ನತ-ಗುಣಮಟ್ಟದ ಉತ್ಪನ್ನಗಳನ್ನು ಗುರಿಯಾಗಿಸಿಕೊಳ್ಳುವ ಅಗತ್ಯವನ್ನು ಹೇಳಿದ ಅವರು, ಭಾರತವು ಜಾಗತಿಕವಾಗಿ ಗೌರವಿಸಲ್ಪಟ್ಟ ಮತ್ತು ಮೌಲ್ಯಯುತವಾದ ಸರಕು ಮತ್ತು ಸೇವೆಗಳನ್ನು ಉತ್ಪಾದಿಸಬೇಕು, ನಾವೀನ್ಯತೆಯ ಕೇಂದ್ರವಾಗಿ ದೇಶದ ಸ್ಥಾನವನ್ನು ಬಲಪಡಿಸಬೇಕು ಎಂದು ಹೇಳಿದರು.

ಕೃತಕ ಬುದ್ದಿಮತ್ತೆ, ಬಾಹ್ಯಾಕಾಶ ಸಂಶೋಧನೆ, ಅರೆವಾಹಕಗಳು ಮತ್ತು ಹಸಿರು ಶಕ್ತಿಯಂತಹ ಉದಯೋನ್ಮುಖ ತಂತ್ರಜ್ಞಾನಗಳ ಮಹತ್ವದ ಬಗ್ಗೆ ಅವರು ಬೆಳಕು ಚೆಲ್ಲಿದರು.

ನಮ್ಮ ಯುವಕರು, ನಾವೀನ್ಯಕಾರರು ಮತ್ತು ಉದ್ಯಮಿಗಳು ಭಾರತವನ್ನು ಜಾಗತಿಕ ಮನ್ನಣೆಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಇನ್ನು ಹಿಂದಿನ ಅಭಿಯಾನಗಳಿಂದ ಹೆಚ್ಚಿದ ಜಾಗೃತಿಯ ಹೊರತಾಗಿಯೂ ಡಿಜಿಟಲ್‌ ವಂಚನೆಯ ವಿಷಯವನ್ನು ಉಲ್ಲೇಖಿಸಿದ ಅವರು, ಡಿಜಿಟಲ್‌ ಸಾಕ್ಷರತೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಕೆವೈಸಿ ಪ್ರಕ್ರಿಯೆಯ ಬಗ್ಗೆ ಕೇಳುಗರಿಗೆ ಅವರು ನೆನಪಿಸಿದರು. ಡಿಜಿಟಲ್‌ ವೇದಿಕೆಗಳನ್ನು ಬಳಸುವಾಗ ಜಾಗರೂಕರಾಗಿರಲು ನಾಗರಿಕರನ್ನು ಒತ್ತಾಯಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

15 mins ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

26 mins ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

36 mins ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

2 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

2 hours ago

ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago