ದೇಶ- ವಿದೇಶ

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ ತಂತ್ರಜ್ಞಾನ, ಸಾಮಾಜಿಕ ಜಾಗೃತಿ ಹಾಗೂ ಭಾರತದ ಸಾಂಸ್ಕೃತಿಕ ಪರಂಪರೆಯ ಕುರಿತು ಆಲೋಚನೆಗಳನ್ನು ಹಂಚಿಕೊಂಡರು.

ಎಐ ಇಂಪ್ಯಾಕ್ಟ್‌ ಶೃಂಗಸಭೆ 2026ರ ಬಗ್ಗೆ ಮಾತನಾಡುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಭೆಯಲ್ಲಿ ಜಾಗತಿಕ ನಾಯಕರು ಮತ್ತು ತಂತ್ರಜ್ಞಾನ ಸಿಇಓಗಳನ್ನು ಭೇಟಿಯಾದ ಬಗ್ಗೆ ಹೇಳಿದರು.

ಶೃಂಗಸಭೆಯ ಪ್ರದರ್ಶನದಲ್ಲಿ ನಾನು ವಿಶ್ವ ನಾಯಕರಿಗೆ ಅಸಂಖ್ಯಾತ ವಿಷಯಗಳನ್ನು ತೋರಿಸಿದೆ. ಪ್ರಾಣಿಗಳ ಚಿಕಿತ್ಸೆಯಲ್ಲಿ ಎಐ ಹೇಗೆ ಸಹಾಯ ಮಾಡುತ್ತದೆ. ರೈತರು ದಿನದ 24 ಗಂಟೆಯೂ ಎಐ ನೆರವಿನ ಸಹಾಯದಿಂದ ತಮ್ಮ ಡೈರಿ ಮತ್ತು ಜಾನುವಾರುಗಳನ್ನು ಹೇಗೆ ಮೇಲ್ವಿಚಾರಣೆ ಮಾಡಬಹುದು ಎಂಬುದನ್ನು ಶೃಂಗಸಭೆಯು ಪ್ರದರ್ಶಿಸಿತು ಎಂದು ಹೇಳಿದರು.

ಭಾರತೀಯ ತಯಾರಕರು ಮತ್ತು ಸ್ಮಾರ್ಟ್‌ ಆಪ್‌ಗಳು ಶೂನ್ಯ ದೋಷ, ಉನ್ನತ-ಗುಣಮಟ್ಟದ ಉತ್ಪನ್ನಗಳನ್ನು ಗುರಿಯಾಗಿಸಿಕೊಳ್ಳುವ ಅಗತ್ಯವನ್ನು ಹೇಳಿದ ಅವರು, ಭಾರತವು ಜಾಗತಿಕವಾಗಿ ಗೌರವಿಸಲ್ಪಟ್ಟ ಮತ್ತು ಮೌಲ್ಯಯುತವಾದ ಸರಕು ಮತ್ತು ಸೇವೆಗಳನ್ನು ಉತ್ಪಾದಿಸಬೇಕು, ನಾವೀನ್ಯತೆಯ ಕೇಂದ್ರವಾಗಿ ದೇಶದ ಸ್ಥಾನವನ್ನು ಬಲಪಡಿಸಬೇಕು ಎಂದು ಹೇಳಿದರು.

ಕೃತಕ ಬುದ್ದಿಮತ್ತೆ, ಬಾಹ್ಯಾಕಾಶ ಸಂಶೋಧನೆ, ಅರೆವಾಹಕಗಳು ಮತ್ತು ಹಸಿರು ಶಕ್ತಿಯಂತಹ ಉದಯೋನ್ಮುಖ ತಂತ್ರಜ್ಞಾನಗಳ ಮಹತ್ವದ ಬಗ್ಗೆ ಅವರು ಬೆಳಕು ಚೆಲ್ಲಿದರು.

ನಮ್ಮ ಯುವಕರು, ನಾವೀನ್ಯಕಾರರು ಮತ್ತು ಉದ್ಯಮಿಗಳು ಭಾರತವನ್ನು ಜಾಗತಿಕ ಮನ್ನಣೆಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಇನ್ನು ಹಿಂದಿನ ಅಭಿಯಾನಗಳಿಂದ ಹೆಚ್ಚಿದ ಜಾಗೃತಿಯ ಹೊರತಾಗಿಯೂ ಡಿಜಿಟಲ್‌ ವಂಚನೆಯ ವಿಷಯವನ್ನು ಉಲ್ಲೇಖಿಸಿದ ಅವರು, ಡಿಜಿಟಲ್‌ ಸಾಕ್ಷರತೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಕೆವೈಸಿ ಪ್ರಕ್ರಿಯೆಯ ಬಗ್ಗೆ ಕೇಳುಗರಿಗೆ ಅವರು ನೆನಪಿಸಿದರು. ಡಿಜಿಟಲ್‌ ವೇದಿಕೆಗಳನ್ನು ಬಳಸುವಾಗ ಜಾಗರೂಕರಾಗಿರಲು ನಾಗರಿಕರನ್ನು ಒತ್ತಾಯಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago