ದೇಶ- ವಿದೇಶ

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್ ಸೌತ್ ರಾಷ್ಟ್ರಗಳಿಗೆ ಒಳಗೊಳ್ಳುವಿಕೆ ಮತ್ತು ಸಬಲೀಕರಣದ ಸಾಧನವಾಗಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026ರ ನಾಲ್ಕನೇ ದಿನ ಜಾಗತಿಕ ನಾಯಕರು ಮತ್ತು ತಂತ್ರಜ್ಞಾನ ತಜ್ಞರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ಯಶಸ್ವಿಯಾಗುವ ಯಾವುದೇ ಎಐ ಮಾದರಿಯನ್ನು ವಿಶ್ವದ ಎಲ್ಲೆಡೆ ಬಳಸಬಹುದು ಎಂದರು.

ದಿಲ್ಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026 ವೇಳೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಗೂಗಲ್ ಸಿಇಒ ಸುಂದರ್ ಪಿಚೈ, ಓಪನ್‌ ಎಐ ಸಿಇಒ ಸ್ಯಾಮ್ ಆಲ್ಟ್‌ಮನ್ ಸೇರಿದಂತೆ ಇತರ ತಂತ್ರಜ್ಞಾನ ನಾಯಕರೊಂದಿಗೆ ಕೈಜೋಡಿಸಿದರು.

ಕೃತಕ ಬುದ್ಧಿಮತ್ತೆ (AI)ಯ ಜನತಂತ್ರೀಕರಣಕ್ಕೆ ಕರೆ ನೀಡಿದರು. ಈ ಸಂದರ್ಭದಲ್ಲಿ ಅವರು ಭಾರತದ ‘ಮಾನವ್ ವಿಷನ್’ ನ್ನು ಅನಾವರಣಗೊಳಿಸಿದರು. ಈ ವಿಷನ್ ನಲ್ಲಿ ನೈತಿಕ ಮತ್ತು ನೀತಿಪರ ವ್ಯವಸ್ಥೆಗಳು, ಹೊಣೆಗಾರ ಆಡಳಿತ ಮತ್ತು ರಾಷ್ಟ್ರೀಯ ಸ್ವಾಯತ್ತತೆ ಒಳಗೊಂಡಿವೆ ಎಂದರು.

ಡೀಪ್‌ಫೇಕ್‌ಗಳು ಮತ್ತು ಕೃತಕವಾಗಿ ಸೃಷ್ಟಿಸಲಾದ ವಿಷಯಗಳು ಮುಕ್ತ ಸಮಾಜಗಳಲ್ಲಿ ಅಸ್ಥಿರತೆ ಉಂಟುಮಾಡುತ್ತವೆ. ಕೆಲವರು ಎಐ ಎಂದರೆ ಭಯಪಡುತ್ತಾರೆ, ಕೆಲವರು ಅದರಲ್ಲಿ ಭವಿಷ್ಯವನ್ನು ನೋಡುತ್ತಾರೆ. ಭಾರತ ಎಐಯಲ್ಲೇ ಭವಿಷ್ಯವನ್ನು ನೋಡುತ್ತಿದೆ ಎಂದು ಮೋದಿ ಹೇಳಿದರು.

ಎಐ ಹಂಚಿಕೊಂಡಾಗ ಮಾತ್ರ ಅದರ ಪ್ರಯೋಜನ ಎಲ್ಲರಿಗೂ ಸಿಗುತ್ತದೆ. ಅದನ್ನು ಜಾಗತಿಕ ಸಾಮಾನ್ಯ ಸಂಪತ್ತಾಗಿ ಅಭಿವೃದ್ಧಿಪಡಿಸುವ ಸಂಕಲ್ಪ ಮಾಡಬೇಕು. ಎಐಗೆ ಆಕಾಶದವರೆಗೆ ಮುಕ್ತ ವಾತಾವರಣ ಕಲ್ಪಿಸಿಕೊಡಬೇಕು, ಆದರೆ ಅದರ ನಿಯಂತ್ರಣ ನಮ್ಮ ಕೈಯಲ್ಲಿರಬೇಕು ಎಂದರು.

ಇದೇ ವೇಳೆ, ಆಹಾರ ಪ್ಯಾಕೆಟ್‌ಗಳ ಮೇಲಿರುವ ಪೌಷ್ಟಿಕ ಲೇಬಲ್‌ಗಳ ಮಾದರಿಯಲ್ಲಿ, ಎಐ ಮೂಲಕ ಸೃಷ್ಟಿಸಲಾದ ವಿಷಯಗಳಿಗೆ ಪ್ರಮಾಣಿಕೀಕೃತ ಲೇಬಲ್‌ಗಳು ಇರಬೇಕು ಎಂಬುದನ್ನು ಸೂಚಿಸಿದರು.

ವಿವಿಧ ದೇಶಗಳ ಗಣ್ಯರು ಭಾಗಿ
ದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ಈ ಸಮಾವೇಶದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಮಾನುಯೆಲ್ ಮ್ಯಾಕ್ರೋನ್, ಬ್ರೆಜಿಲ್ ಅಧ್ಯಕ್ಷ ಲುಯಿಜ್ ಇನಾಸಿಯೊ ಲುಲಾ ದ ಸಿಲ್ವಾ, ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ, ಭೂತಾನ್ ಪ್ರಧಾನಮಂತ್ರಿ ತ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಮಂತ್ರಿ ನವೀಂಚಂದ್ರ ರಾಮಗೂಲಾಮ್, ಕ್ರೊಯೇಶಿಯಾ ಪ್ರಧಾನಮಂತ್ರಿ ಆಂದ್ರೇಜ್ ಪ್ಲೆಂಕೋವಿಕ್, ಸರ್ಬಿಯಾ ಅಧ್ಯಕ್ಷ ಅಲೆಕ್ಸಾಂಡರ್ ವುಚಿಚ್, ಸೆಶೆಲ್ಸ್ ಉಪಾಧ್ಯಕ್ಷ ಸೆಬಾಸ್ಟಿಯನ್ ಪಿಲ್ಲೇ, ಎಸ್ಟೋನಿಯಾ ಅಧ್ಯಕ್ಷ ಅಲಾರ್ ಕರಿಸ್ ಮತ್ತು ಫಿನ್ಲ್ಯಾಂಡ್ ಪ್ರಧಾನಮಂತ್ರಿ ಪೆಟೇರಿ ಓರ್ಪೋ, ಗುಗಲ್‌ ಸಿಇಒ ಸುಂದರ್‌ ಪಿಚೈ ಸೇರಿದಂತೆ ಅನೇಕ ಜಾಗತಿಕ ನಾಯಕರು ಭಾಗವಹಿಸಿದ್ದರು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

8 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

8 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

8 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

8 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

8 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

9 hours ago