ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು “ಅಸಾಧಾರಣ” ಆಗಿರುವುದಾಗಿ ಹೇಳಿದ್ದಾರೆ. ಭಾರತ ಎಐ ತಂತ್ರಜ್ಞಾನದಲ್ಲಿ ಪ್ರಪಂಚದ ಅತ್ಯಂತ ಭರವಸೆಯ ಇಕೋಸಿಸ್ಟಮ್ಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಪಿಚೈ, ಭಾರತದ ಭಾಷಾ ವೈವಿಧ್ಯ, ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ ಮತ್ತು ಉತ್ತಮ ಆಧಾರಗಳಿಂದಾಗಿ ಎಐ ನಾವೀನ್ಯತೆಗೆ ಶಕ್ತಿಶಾಲಿ ಆಧಾರವನ್ನು ಒದಗಿಸುತ್ತದೆ ಎಂದು ಹೇಳಿದರು.
ಎಐ ಇದು ನಮ್ಮ ಜೀವನಕಾಲದ ಅತಿದೊಡ್ಡ ಪ್ಲಾಟ್ಫಾರ್ಮ್ ಶಿಫ್ಟ್. ಇದು ಆರೋಗ್ಯ, ಕೃಷಿ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನು ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಎಐ ಅಳವಡಿಕೆ ಮತ್ತು ಆಶಾವಾದ ಅತ್ಯಧಿಕವಾಗಿದ್ದು, ದೇಶವು ಹಳೆಯ ಸಮಸ್ಯೆಗಳನ್ನು “ಲೀಪ್ಫ್ರಾಗ್” ಮಾಡಿ ಹೊಸ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಅವರು ಹೇಳಿದ್ದಾರೆ.
ಹೂಡಿಕೆಯ ಬಗ್ಗೆ ಪಿಚೈ ನಿಲುವೇನು?
ಪಿಚೈ ಅವರು ಎಐ ಹೂಡಿಕೆಯ ಬಗ್ಗೆ ಮಾತನಾಡಿ, ಇದು ರೈಲುಮಾರ್ಗಗಳು ಅಥವಾ ಹೈವೇಗಳಂತೆ – ದೊಡ್ಡದಾಗಿ ಕಾಣಿಸಬಹುದು ಆದರೆ ದೀರ್ಘಕಾಲೀನ ಆರ್ಥಿಕ ಮೌಲ್ಯವನ್ನು ತರುತ್ತದೆ. ಗೂಗಲ್ ಕ್ಲೌಡ್ ಬ್ಯಾಕ್ಲಾಗ್ $240 ಬಿಲಿಯನ್ಗೆ ಏರಿಕೆಯಾಗಿದೆ ಎಂದು ಉಲ್ಲೇಖಿಸಿ, ಹೂಡಿಕೆ ಸೂಕ್ತವೆಂದು ವಿವರಿಸಿದರು. 2026ರಲ್ಲಿ ಕ್ಯಾಪೆಕ್ಸ್ $185 ಬಿಲಿಯನ್ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…