ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು “ಅಸಾಧಾರಣ” ಆಗಿರುವುದಾಗಿ ಹೇಳಿದ್ದಾರೆ. ಭಾರತ ಎಐ ತಂತ್ರಜ್ಞಾನದಲ್ಲಿ ಪ್ರಪಂಚದ ಅತ್ಯಂತ ಭರವಸೆಯ ಇಕೋಸಿಸ್ಟಮ್ಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಪಿಚೈ, ಭಾರತದ ಭಾಷಾ ವೈವಿಧ್ಯ, ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ ಮತ್ತು ಉತ್ತಮ ಆಧಾರಗಳಿಂದಾಗಿ ಎಐ ನಾವೀನ್ಯತೆಗೆ ಶಕ್ತಿಶಾಲಿ ಆಧಾರವನ್ನು ಒದಗಿಸುತ್ತದೆ ಎಂದು ಹೇಳಿದರು.
ಎಐ ಇದು ನಮ್ಮ ಜೀವನಕಾಲದ ಅತಿದೊಡ್ಡ ಪ್ಲಾಟ್ಫಾರ್ಮ್ ಶಿಫ್ಟ್. ಇದು ಆರೋಗ್ಯ, ಕೃಷಿ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನು ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಎಐ ಅಳವಡಿಕೆ ಮತ್ತು ಆಶಾವಾದ ಅತ್ಯಧಿಕವಾಗಿದ್ದು, ದೇಶವು ಹಳೆಯ ಸಮಸ್ಯೆಗಳನ್ನು “ಲೀಪ್ಫ್ರಾಗ್” ಮಾಡಿ ಹೊಸ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಅವರು ಹೇಳಿದ್ದಾರೆ.
ಹೂಡಿಕೆಯ ಬಗ್ಗೆ ಪಿಚೈ ನಿಲುವೇನು?
ಪಿಚೈ ಅವರು ಎಐ ಹೂಡಿಕೆಯ ಬಗ್ಗೆ ಮಾತನಾಡಿ, ಇದು ರೈಲುಮಾರ್ಗಗಳು ಅಥವಾ ಹೈವೇಗಳಂತೆ – ದೊಡ್ಡದಾಗಿ ಕಾಣಿಸಬಹುದು ಆದರೆ ದೀರ್ಘಕಾಲೀನ ಆರ್ಥಿಕ ಮೌಲ್ಯವನ್ನು ತರುತ್ತದೆ. ಗೂಗಲ್ ಕ್ಲೌಡ್ ಬ್ಯಾಕ್ಲಾಗ್ $240 ಬಿಲಿಯನ್ಗೆ ಏರಿಕೆಯಾಗಿದೆ ಎಂದು ಉಲ್ಲೇಖಿಸಿ, ಹೂಡಿಕೆ ಸೂಕ್ತವೆಂದು ವಿವರಿಸಿದರು. 2026ರಲ್ಲಿ ಕ್ಯಾಪೆಕ್ಸ್ $185 ಬಿಲಿಯನ್ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…