ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು “ಅಸಾಧಾರಣ” ಆಗಿರುವುದಾಗಿ ಹೇಳಿದ್ದಾರೆ. ಭಾರತ ಎಐ ತಂತ್ರಜ್ಞಾನದಲ್ಲಿ ಪ್ರಪಂಚದ ಅತ್ಯಂತ ಭರವಸೆಯ ಇಕೋಸಿಸ್ಟಮ್ಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಪಿಚೈ, ಭಾರತದ ಭಾಷಾ ವೈವಿಧ್ಯ, ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ ಮತ್ತು ಉತ್ತಮ ಆಧಾರಗಳಿಂದಾಗಿ ಎಐ ನಾವೀನ್ಯತೆಗೆ ಶಕ್ತಿಶಾಲಿ ಆಧಾರವನ್ನು ಒದಗಿಸುತ್ತದೆ ಎಂದು ಹೇಳಿದರು.
ಎಐ ಇದು ನಮ್ಮ ಜೀವನಕಾಲದ ಅತಿದೊಡ್ಡ ಪ್ಲಾಟ್ಫಾರ್ಮ್ ಶಿಫ್ಟ್. ಇದು ಆರೋಗ್ಯ, ಕೃಷಿ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನು ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಎಐ ಅಳವಡಿಕೆ ಮತ್ತು ಆಶಾವಾದ ಅತ್ಯಧಿಕವಾಗಿದ್ದು, ದೇಶವು ಹಳೆಯ ಸಮಸ್ಯೆಗಳನ್ನು “ಲೀಪ್ಫ್ರಾಗ್” ಮಾಡಿ ಹೊಸ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಅವರು ಹೇಳಿದ್ದಾರೆ.
ಹೂಡಿಕೆಯ ಬಗ್ಗೆ ಪಿಚೈ ನಿಲುವೇನು?
ಪಿಚೈ ಅವರು ಎಐ ಹೂಡಿಕೆಯ ಬಗ್ಗೆ ಮಾತನಾಡಿ, ಇದು ರೈಲುಮಾರ್ಗಗಳು ಅಥವಾ ಹೈವೇಗಳಂತೆ – ದೊಡ್ಡದಾಗಿ ಕಾಣಿಸಬಹುದು ಆದರೆ ದೀರ್ಘಕಾಲೀನ ಆರ್ಥಿಕ ಮೌಲ್ಯವನ್ನು ತರುತ್ತದೆ. ಗೂಗಲ್ ಕ್ಲೌಡ್ ಬ್ಯಾಕ್ಲಾಗ್ $240 ಬಿಲಿಯನ್ಗೆ ಏರಿಕೆಯಾಗಿದೆ ಎಂದು ಉಲ್ಲೇಖಿಸಿ, ಹೂಡಿಕೆ ಸೂಕ್ತವೆಂದು ವಿವರಿಸಿದರು. 2026ರಲ್ಲಿ ಕ್ಯಾಪೆಕ್ಸ್ $185 ಬಿಲಿಯನ್ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…