ದೇಶ- ವಿದೇಶ

ತುರ್ತು ಪರಿಸ್ಥಿತಿಗೆ 50 ವರ್ಷ: ಪ್ರಧಾನಿ ಮೋದಿ ಟ್ವೀಟ್‌ಗೆ ಟಾಂಗ್‌ ಕೊಟ್ಟ ಎಐಸಿಸಿ ಅಧ್ಯಕ್ಷ ಖರ್ಗೆ

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ ಇಂದಿಗೆ 49 ವರ್ಷಗಳು ಕಳೆದು 50 ವರ್ಷ ಆರಂಭವಾಗುತ್ತಿದ್ದು, ಈ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಟೀಕಾಪ್ರಹಾರ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಆಡಳಿತಾವಧಿಯಲ್ಲಿನ ಲೋಪಗಳ ಬಗ್ಗೆ ಮಾತನಾಡಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿರುವ ಖರ್ಗೆ ಅವರು, ಕಳೆದ 10 ವರ್ಷಗಳಲ್ಲಿ 140 ಭಾರತೀಯರನ್ನು ಅಘೋಷಿತ ತುರ್ತು ಪರಿಸ್ಥಿತಿಗೆ ನೂಕಿ, ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಆಳವಾದ ಹೊಡೆತವನ್ನು ನೀಡಿದೆ ಎಂದು ಹೇಳಿದ್ದಾರೆ.

ದೇಶವು ಭವಿಷ್ಯದತ್ತ ನೋಡುತ್ತಿದೆ, ನಿಮ್ಮ ನ್ಯೂನತೆಗಳನ್ನು ಮರೆಮಾಚಲು ನೀವು ಭೂತಕಾಲವನ್ನು ಹೇಳುತ್ತಿರುತ್ತೀರಿ. ಕಳೆದ 10 ವರ್ಷಗಳಲ್ಲಿ ನೀವು 140 ಕೋಟಿ ಭಾರತೀಯರನ್ನು ಅನುಭವಿಸುವಂತೆ ಮಾಡಿದ “ಅಘೋಷಿತ ತುರ್ತು ಪರಿಸ್ಥಿತಿ” ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಆಳವಾದ ಹೊಡೆತವನ್ನು ನೀಡಿದೆ.

ಪಕ್ಷಗಳನ್ನು ಒಡೆಯುವುದು, ಚುನಾಯಿತ ಸರಕಾರಗಳನ್ನು ಹಿಂಬಾಗಿಲ ಮೂಲಕ ಬೀಳಿಸುವುದು, ಶೇ.95ರಷ್ಟು ವಿರೋಧ ಪಕ್ಷದ ನಾಯಕರ ಮೇಲೆ ಇಡಿ, ಸಿಬಿಐ, ಐಟಿ ಪ್ರಯೋಗಿಸುವುದು, ಮುಖ್ಯಮಂತ್ರಿಗಳನ್ನೂ ಜೈಲಿಗೆ ತಳ್ಳುವುದು, ಚುನಾವಣೆಗೂ ಮುನ್ನ ಅಧಿಕಾರ ಬಳಸಿ ಮಟ್ಟ ಹಾಳು ಮಾಡುವುದು- ಇದೇನಾ? ಇದು ಅಘೋಷಿತ ತುರ್ತುಪರಿಸ್ಥಿತಿಯಲ್ಲವೇ?

ಮೋದಿ ಜಿ ಒಮ್ಮತ ಮತ್ತು ಸಹಕಾರದ ಬಗ್ಗೆ ಮಾತನಾಡುತ್ತಾರೆ, ಆದರೆ ಅವರ ಕಾರ್ಯಗಳು ಇದಕ್ಕೆ ವಿರುದ್ಧವಾಗಿವೆ.

?146 ವಿರೋಧ ಪಕ್ಷದ ಸಂಸದರನ್ನು ಸಂಸತ್ತಿನಿಂದ ಅಮಾನತುಗೊಳಿಸಿದಾಗ ಮತ್ತು ಅಪರಾಧ ನ್ಯಾಯ ವ್ಯವಸ್ಥೆಯನ್ನು ಬದಲಾಯಿಸಲು ದೇಶದ ನಾಗರಿಕರ ಮೇಲೆ ಮೂರು ಕಾನೂನುಗಳನ್ನು ಹೇರಿದಾಗ – ಭಾರತೀಯ ನಾಗರಿಕ ಸಂರಕ್ಷಣಾ ಸಂಹಿತೆ, 2023, ಭಾರತೀಯ ನ್ಯಾಯ ಸಂಹಿತೆ, 2023 ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ, 2023; ಅದನ್ನು ಅಂಗೀಕರಿಸಿದಾಗ ಒಮ್ಮತದ ಪದ ಎಲ್ಲಿತ್ತು?

?ಛತ್ರಪತಿ ಶಿವಾಜಿ ಮಹಾರಾಜ್ ಜೀ, ಮಹಾತ್ಮ ಗಾಂಧೀಜಿ ಮತ್ತು ಬಾಬಾಸಾಹೇಬ್ ಡಾ. ಅಂಬೇಡ್ಕರ್ ಜೀ ಅವರಂತಹ ಮಹಾನ್ ವ್ಯಕ್ತಿಗಳ ಪ್ರತಿಮೆಗಳನ್ನು ಸಂಸತ್ತಿನ ಆವರಣದಿಂದ ಮೂಲೆಗೆ ಪ್ರತಿಪಕ್ಷಗಳನ್ನು ಕೇಳದೆ ಸ್ಥಳಾಂತರಿಸಿದಾಗ, ಒಮ್ಮತದ ಪದ ಎಲ್ಲಿದೆ?

?ನಮ್ಮ 15 ಕೋಟಿ ರೈತ ಕುಟುಂಬಗಳ ಮೇಲೆ ಮೂರು ಕರಾಳ ಕಾನೂನನ್ನು ಹೇರಿ ತಿಂಗಳಾನುಗಟ್ಟಲೆ ಅವರದೇ ನಾಡಿನಲ್ಲಿ ಬೀದಿಗಿಳಿದು ಹಿಂಸಿಸಿದಾಗ ಒಮ್ಮತದ ಮಾತು ಎಲ್ಲಿತ್ತು?

ನೋಟು ಅಮಾನ್ಯೀಕರಣವಾಗಲಿ, ತರಾತುರಿಯಲ್ಲಿ ಜಾರಿಯಾದ ಲಾಕ್‌ಡೌನ್ ಆಗಲಿ ಅಥವಾ ಎಲೆಕ್ಟೋರಲ್ ಬಾಂಡ್‌ಗಳ ಕಾನೂನು ಆಗಿರಲಿ, ಮೋದಿ ಸರ್ಕಾರವು ಒಮ್ಮತ/ಸಹಕಾರವನ್ನು ಬಳಸದ ನೂರಾರು ಉದಾಹರಣೆಗಳಿವೆ. ಪ್ರತಿಪಕ್ಷಗಳ ಬಗ್ಗೆ ಏನು, ನಮ್ಮ ನಾಯಕರನ್ನು ಕತ್ತಲೆಯಲ್ಲಿ ಇರಿಸಿದೆ!

17 ನೇ ಲೋಕಸಭೆಯಲ್ಲಿ ಇತಿಹಾಸದಲ್ಲಿ ಅತ್ಯಂತ ಕಡಿಮೆ – ಕೇವಲ 16% ಮಸೂದೆಗಳು ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಹೋದವು ಮತ್ತು ಲೋಕಸಭೆಯಲ್ಲಿ 35% ಮಸೂದೆಗಳು ಒಂದು ಗಂಟೆಯೊಳಗೆ ಅಂಗೀಕಾರಗೊಂಡವು. ರಾಜ್ಯಸಭೆಯಲ್ಲೂ ಈ ಪ್ರಮಾಣ ಶೇ.34ರಷ್ಟಿದೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ದುಸ್ಥಿತಿಗೆ ಬಿಜೆಪಿ ಕಾರಣವಾಗಿದೆ. ಕಾಂಗ್ರೆಸ್ ಯಾವಾಗಲೂ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬೆಂಬಲಿಸುತ್ತದೆ ಮತ್ತು ನಾವು ಅದನ್ನು ಬೆಂಬಲಿಸುತ್ತೇವೆ ಎಂದು ಮೋದಿ ಮತ್ತು ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಮೋದಿ ಟ್ವೀಟ್‌ನಲ್ಲೆನಿತ್ತು?: ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲ ಮಹಾಪುರುಷರಿಗೆ ಮತ್ತು ಮಹಿಳೆಯರಿಗೆ ಗೌರವ ಸಲ್ಲಿಸುವ ದಿನವಾಗಿದೆ.

#DarkDaysOfEmergency ಕಾಂಗ್ರೆಸ್ ಪಕ್ಷವು ಮೂಲಭೂತ ಸ್ವಾತಂತ್ರ್ಯಗಳನ್ನು ಹೇಗೆ ಬುಡಮೇಲು ಮಾಡಿದೆ ಮತ್ತು ಪ್ರತಿಯೊಬ್ಬ ಭಾರತೀಯರು ಬಹಳವಾಗಿ ಗೌರವಿಸುವ ಭಾರತದ ಸಂವಿಧಾನವನ್ನು ಹೇಗೆ ತುಳಿಯಿತು ಎಂಬುದನ್ನು ನಮಗೆ ನೆನಪಿಸುತ್ತದೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago