ಭೋಪಾಲ್: ಕೇಂದ್ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಮಾನದಲ್ಲಿ ಮುರಿದ ಸೀಟ್ನಲ್ಲಿ ಪ್ರಯಾಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಸಂಸ್ಥೆ ಕ್ಷಮೆ ಕೋರಿದೆ.
ಏರ್ ಇಂಡಿಯಾ ವಿಮಾದಲ್ಲಿ ಎದುರಾದ ಅನಾನುಕೂಲತೆಯ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಅವರು, ನಾನು ಕೆಲಸದ ಹಿನ್ನೆಲೆಯಲ್ಲಿ ಏರ್ ಇಂಡಿಯಾ AI436ರಲ್ಲಿ ಭೋಪಾಲ್ನಿಂದ ದೆಹಲಿಗೆ ತೆರಳುತ್ತಿದ್ದೆ. ಈ ವೇಳೆ ನನಗೆ ನಿಗದಿಯಾಗಿದ್ದ ಸೀಟ್ ನಂಬರ್ 8ಸಿ ನಲ್ಲಿ ಕುಳಿತುಕೊಳ್ಳಲು ಹೋದಾಗ, ಆ ಸೀಟು ಮುರಿದ ಸ್ಥಿತಿಯಲ್ಲಿ ಕಂಡು ಬಂದಿತು. ಆದರೆ ಆ ವಿಮಾನದ ಕೆಲ ಸೀಟುಗಳು ಹಾಗೆಯೇ ಇತ್ತು. ಆದರೆ ಪ್ರಯಾಣಿಕರಿಂದ ಪೂರ್ಣ ಪ್ರಮಾಣದ ಟಿಕೆಟ್ ಹಣವನ್ನು ಪಡೆದು, ಈ ರೀತಿಯ ಸೇವೆ ಒದಗಿಸುವುದು ಅನೈತಿಕ ಪದ್ಧತಿ ಎಂದು ವಾಗ್ದಾಳಿ ನಡೆಸಿದ್ದರು.
ನನ್ನ ಸೀಟು ಅನ್ನು ಬದಲಾಯಿಸಿಕೊಳ್ಳುವತೆ ಸಿಬ್ಬಂದಿ ತಿಳಿಸಿದರು. ಆದರೆ ಇತರೆ ಪ್ರಯಾಣಿಕರಿಗೆ ನನ್ನಿಂದ ಅನಾನುಕೂಲವಾಗುವುದು ಸರಿಯಲ್ಲ ಎಂದು ಅರಿತು, ನಾನು ಮುಇದ ಸೀಟಿನಲ್ಲೇ ಪ್ರಯಾಣಿಸಿದೆ ಎಂದು ತಿಳಿಸಿದ್ದಾರೆ.
ಇನ್ನು ಭವಿಷ್ಯದಲ್ಲಿ ಯಾವುದೇ ಪ್ರಯಾಣಿಕರಿಗೆ ಇಂತಹ ಅನಾನುಕೂಲತೆಯ ಪ್ರಯಾಣವನ್ನು ಒದಗಿಸದಂತೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಕ್ರಮ ಕೈಗೊಳ್ಳುತ್ತದೆಯೇ ಅಥವಾ ಪ್ರಯಾಣಿಕರ ತುರ್ತು ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡು ಇದೇ ರೀತಿಯ ಸೇವೆಗಳನ್ನು ಒದಗಿಸುತ್ತದೆಯೇ ಎಂಬುದನ್ನು ಪ್ರಶ್ನಿಸಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ಅವರ ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯೂ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸರ್ ನಿಮಗೆ ಉಂಟಾದ ಅನಾನುಕೂಲತೆಗಾಗ ನಾವು ಕ್ಷಮೆಯಾಚಿಸುತ್ತೇವೆ. ಅಲ್ಲದೇ ಭವಿಷ್ಯದಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…
ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…
ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…