ದೇಶ- ವಿದೇಶ

ಮುರಿದ ಸೀಟ್‌ನಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಪ್ರಯಾಣ: ಕ್ಷಮೆ ಕೋರಿದ ಏರ್‌ ಇಂಡಿಯಾ

ಭೋಪಾಲ್‌: ಕೇಂದ್‌ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ವಿಮಾನದಲ್ಲಿ ಮುರಿದ ಸೀಟ್‌ನಲ್ಲಿ ಪ್ರಯಾಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಏರ್‌ ಇಂಡಿಯಾ ಸಂಸ್ಥೆ ಕ್ಷಮೆ ಕೋರಿದೆ.

ಏರ್‌ ಇಂಡಿಯಾ ವಿಮಾದಲ್ಲಿ ಎದುರಾದ ಅನಾನುಕೂಲತೆಯ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದ ಅವರು, ನಾನು ಕೆಲಸದ ಹಿನ್ನೆಲೆಯಲ್ಲಿ ಏರ್‌ ಇಂಡಿಯಾ AI436ರಲ್ಲಿ ಭೋಪಾಲ್‌ನಿಂದ ದೆಹಲಿಗೆ ತೆರಳುತ್ತಿದ್ದೆ. ಈ ವೇಳೆ ನನಗೆ ನಿಗದಿಯಾಗಿದ್ದ ಸೀಟ್‌ ನಂಬರ್‌ 8ಸಿ ನಲ್ಲಿ ಕುಳಿತುಕೊಳ್ಳಲು ಹೋದಾಗ, ಆ ಸೀಟು ಮುರಿದ ಸ್ಥಿತಿಯಲ್ಲಿ ಕಂಡು ಬಂದಿತು. ಆದರೆ ಆ ವಿಮಾನದ ಕೆಲ ಸೀಟುಗಳು ಹಾಗೆಯೇ ಇತ್ತು. ಆದರೆ ಪ್ರಯಾಣಿಕರಿಂದ ಪೂರ್ಣ ಪ್ರಮಾಣದ ಟಿಕೆಟ್‌ ಹಣವನ್ನು ಪಡೆದು, ಈ ರೀತಿಯ ಸೇವೆ ಒದಗಿಸುವುದು ಅನೈತಿಕ ಪದ್ಧತಿ ಎಂದು ವಾಗ್ದಾಳಿ ನಡೆಸಿದ್ದರು.

ನನ್ನ ಸೀಟು ಅನ್ನು ಬದಲಾಯಿಸಿಕೊಳ್ಳುವತೆ ಸಿಬ್ಬಂದಿ ತಿಳಿಸಿದರು. ಆದರೆ ಇತರೆ ಪ್ರಯಾಣಿಕರಿಗೆ ನನ್ನಿಂದ ಅನಾನುಕೂಲವಾಗುವುದು ಸರಿಯಲ್ಲ ಎಂದು ಅರಿತು, ನಾನು ಮುಇದ ಸೀಟಿನಲ್ಲೇ ಪ್ರಯಾಣಿಸಿದೆ ಎಂದು ತಿಳಿಸಿದ್ದಾರೆ.

ಇನ್ನು ಭವಿಷ್ಯದಲ್ಲಿ ಯಾವುದೇ ಪ್ರಯಾಣಿಕರಿಗೆ ಇಂತಹ ಅನಾನುಕೂಲತೆಯ ಪ್ರಯಾಣವನ್ನು ಒದಗಿಸದಂತೆ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ಕ್ರಮ ಕೈಗೊಳ್ಳುತ್ತದೆಯೇ ಅಥವಾ ಪ್ರಯಾಣಿಕರ ತುರ್ತು ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡು ಇದೇ ರೀತಿಯ ಸೇವೆಗಳನ್ನು ಒದಗಿಸುತ್ತದೆಯೇ ಎಂಬುದನ್ನು ಪ್ರಶ್ನಿಸಿದ್ದಾರೆ.

ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯೂ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಸರ್‌ ನಿಮಗೆ ಉಂಟಾದ ಅನಾನುಕೂಲತೆಗಾಗ ನಾವು ಕ್ಷಮೆಯಾಚಿಸುತ್ತೇವೆ. ಅಲ್ಲದೇ ಭವಿಷ್ಯದಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

31 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

3 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

16 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

18 hours ago