ದೇಶ- ವಿದೇಶ

ಮುರಿದ ಸೀಟ್‌ನಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಪ್ರಯಾಣ: ಕ್ಷಮೆ ಕೋರಿದ ಏರ್‌ ಇಂಡಿಯಾ

ಭೋಪಾಲ್‌: ಕೇಂದ್‌ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ವಿಮಾನದಲ್ಲಿ ಮುರಿದ ಸೀಟ್‌ನಲ್ಲಿ ಪ್ರಯಾಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಏರ್‌ ಇಂಡಿಯಾ ಸಂಸ್ಥೆ ಕ್ಷಮೆ ಕೋರಿದೆ.

ಏರ್‌ ಇಂಡಿಯಾ ವಿಮಾದಲ್ಲಿ ಎದುರಾದ ಅನಾನುಕೂಲತೆಯ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದ ಅವರು, ನಾನು ಕೆಲಸದ ಹಿನ್ನೆಲೆಯಲ್ಲಿ ಏರ್‌ ಇಂಡಿಯಾ AI436ರಲ್ಲಿ ಭೋಪಾಲ್‌ನಿಂದ ದೆಹಲಿಗೆ ತೆರಳುತ್ತಿದ್ದೆ. ಈ ವೇಳೆ ನನಗೆ ನಿಗದಿಯಾಗಿದ್ದ ಸೀಟ್‌ ನಂಬರ್‌ 8ಸಿ ನಲ್ಲಿ ಕುಳಿತುಕೊಳ್ಳಲು ಹೋದಾಗ, ಆ ಸೀಟು ಮುರಿದ ಸ್ಥಿತಿಯಲ್ಲಿ ಕಂಡು ಬಂದಿತು. ಆದರೆ ಆ ವಿಮಾನದ ಕೆಲ ಸೀಟುಗಳು ಹಾಗೆಯೇ ಇತ್ತು. ಆದರೆ ಪ್ರಯಾಣಿಕರಿಂದ ಪೂರ್ಣ ಪ್ರಮಾಣದ ಟಿಕೆಟ್‌ ಹಣವನ್ನು ಪಡೆದು, ಈ ರೀತಿಯ ಸೇವೆ ಒದಗಿಸುವುದು ಅನೈತಿಕ ಪದ್ಧತಿ ಎಂದು ವಾಗ್ದಾಳಿ ನಡೆಸಿದ್ದರು.

ನನ್ನ ಸೀಟು ಅನ್ನು ಬದಲಾಯಿಸಿಕೊಳ್ಳುವತೆ ಸಿಬ್ಬಂದಿ ತಿಳಿಸಿದರು. ಆದರೆ ಇತರೆ ಪ್ರಯಾಣಿಕರಿಗೆ ನನ್ನಿಂದ ಅನಾನುಕೂಲವಾಗುವುದು ಸರಿಯಲ್ಲ ಎಂದು ಅರಿತು, ನಾನು ಮುಇದ ಸೀಟಿನಲ್ಲೇ ಪ್ರಯಾಣಿಸಿದೆ ಎಂದು ತಿಳಿಸಿದ್ದಾರೆ.

ಇನ್ನು ಭವಿಷ್ಯದಲ್ಲಿ ಯಾವುದೇ ಪ್ರಯಾಣಿಕರಿಗೆ ಇಂತಹ ಅನಾನುಕೂಲತೆಯ ಪ್ರಯಾಣವನ್ನು ಒದಗಿಸದಂತೆ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ಕ್ರಮ ಕೈಗೊಳ್ಳುತ್ತದೆಯೇ ಅಥವಾ ಪ್ರಯಾಣಿಕರ ತುರ್ತು ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡು ಇದೇ ರೀತಿಯ ಸೇವೆಗಳನ್ನು ಒದಗಿಸುತ್ತದೆಯೇ ಎಂಬುದನ್ನು ಪ್ರಶ್ನಿಸಿದ್ದಾರೆ.

ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯೂ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಸರ್‌ ನಿಮಗೆ ಉಂಟಾದ ಅನಾನುಕೂಲತೆಗಾಗ ನಾವು ಕ್ಷಮೆಯಾಚಿಸುತ್ತೇವೆ. ಅಲ್ಲದೇ ಭವಿಷ್ಯದಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

5 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

8 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

11 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

14 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

14 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

14 hours ago