ದೇಶ- ವಿದೇಶ

AIR INDIA FLIGHT ಬಾಂಬ್‌ ಬೆದರಿಕೆ: ನ್ಯೂಯಾರ್ಕ್‌ಗೆ ಹೊರಟ್ಟಿದ್ದ ವಿಮಾನ ವಾಪಾಸ್‌ ಮುಂಬೈಗೆ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ವಾಪಾಸ್‌ ಬಂದು ಲ್ಯಾಂಡ್‌ ಆಗಿದೆ.

ಏರ್‌ ಇಂಡಿಯಾ ವಿಮಾನವೂ ಇಂದು(ಮಾರ್ಚ್‌.10) ಮುಂಬೈನಿಂದ ನ್ಯೂಯಾರ್ಕ್‌ಗೆ ಹಾರಾಟ ನಡೆಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಸಂಭಾವ್ಯ ಭದ್ರತಾ ಬೆದರಿಕೆಯನ್ನು ಪತ್ತೆಹಚ್ಚಲಾಯಿತು. ಅಗತ್ಯ ಶಿಷ್ಟಾಚಾರಗಳನ್ನು ಅನುಸರಿಸಿದ ಬಳಿಕ ವಿಮಾನದಲ್ಲಿದ್ದ ಎಲ್ಲರ ಸುರಕ್ಷತೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ವಿಮಾನವು ಮುಂಬೈಗೆ ಹಿಂತಿರುಗಿಸಲಾಗಿದೆ. ಅಲ್ಲದೇ ಈ ಘಟನೆಯ ಮುನ್ನ ಅಗತ್ಯವಿರುವ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ವಿಮಾನವನ್ನು ಇಂದು ಬೆಳಿಗ್ಗೆ 10.25 ಗಂಟೆಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ನಂತರ ವಿಮಾನವನ್ನು ಭದ್ರತಾ ಸಂಸ್ಥೆಗಳಿಂದ ಕಡ್ಡಾಯ ತಪಾಸಣೆಗೆ ಒಳಪಡಿಸಲಾಗಿದೆ. ಹೀಗಾಗಿ ರ್ ಇಂಡಿಯಾ ಅಧಿಕಾರಿಗಳಿಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಇನ್ನು ವಿಮಾನದ ವೇಳಾಪಟ್ಟಿಯಲ್ಲಿ ಈ ವಿಮಾನಯಾನಕ್ಕೆ ಮಾರ್ಚ್‌.11 ರಂದು ಬೆಳಿಗ್ಗೆ 5 ಗಂಟೆಗೆ ತೆರಳಲು ಮರು ನಿಗದಿಪಡಿಸಲಾಗಿದೆ. ಅಲ್ಲಿಯವರೆಗೂ ಎಲ್ಲಾ ಪ್ರಯಾಣಿಕರಿಗೂ ಹೋಟೆಲ್‌ ವಸತಿ, ಊಟ ಹಾಗೂ ಇತರೆ ಸಹಾಯವನ್ನು ನೀಡಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago