ದೇಶ- ವಿದೇಶ

AIR INDIA FLIGHT ಬಾಂಬ್‌ ಬೆದರಿಕೆ: ನ್ಯೂಯಾರ್ಕ್‌ಗೆ ಹೊರಟ್ಟಿದ್ದ ವಿಮಾನ ವಾಪಾಸ್‌ ಮುಂಬೈಗೆ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ವಾಪಾಸ್‌ ಬಂದು ಲ್ಯಾಂಡ್‌ ಆಗಿದೆ.

ಏರ್‌ ಇಂಡಿಯಾ ವಿಮಾನವೂ ಇಂದು(ಮಾರ್ಚ್‌.10) ಮುಂಬೈನಿಂದ ನ್ಯೂಯಾರ್ಕ್‌ಗೆ ಹಾರಾಟ ನಡೆಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಸಂಭಾವ್ಯ ಭದ್ರತಾ ಬೆದರಿಕೆಯನ್ನು ಪತ್ತೆಹಚ್ಚಲಾಯಿತು. ಅಗತ್ಯ ಶಿಷ್ಟಾಚಾರಗಳನ್ನು ಅನುಸರಿಸಿದ ಬಳಿಕ ವಿಮಾನದಲ್ಲಿದ್ದ ಎಲ್ಲರ ಸುರಕ್ಷತೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ವಿಮಾನವು ಮುಂಬೈಗೆ ಹಿಂತಿರುಗಿಸಲಾಗಿದೆ. ಅಲ್ಲದೇ ಈ ಘಟನೆಯ ಮುನ್ನ ಅಗತ್ಯವಿರುವ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ವಿಮಾನವನ್ನು ಇಂದು ಬೆಳಿಗ್ಗೆ 10.25 ಗಂಟೆಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ನಂತರ ವಿಮಾನವನ್ನು ಭದ್ರತಾ ಸಂಸ್ಥೆಗಳಿಂದ ಕಡ್ಡಾಯ ತಪಾಸಣೆಗೆ ಒಳಪಡಿಸಲಾಗಿದೆ. ಹೀಗಾಗಿ ರ್ ಇಂಡಿಯಾ ಅಧಿಕಾರಿಗಳಿಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಇನ್ನು ವಿಮಾನದ ವೇಳಾಪಟ್ಟಿಯಲ್ಲಿ ಈ ವಿಮಾನಯಾನಕ್ಕೆ ಮಾರ್ಚ್‌.11 ರಂದು ಬೆಳಿಗ್ಗೆ 5 ಗಂಟೆಗೆ ತೆರಳಲು ಮರು ನಿಗದಿಪಡಿಸಲಾಗಿದೆ. ಅಲ್ಲಿಯವರೆಗೂ ಎಲ್ಲಾ ಪ್ರಯಾಣಿಕರಿಗೂ ಹೋಟೆಲ್‌ ವಸತಿ, ಊಟ ಹಾಗೂ ಇತರೆ ಸಹಾಯವನ್ನು ನೀಡಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

7 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

9 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

12 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

15 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

15 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

15 hours ago