ದೇಶ- ವಿದೇಶ

AIR INDIA FLIGHT ಬಾಂಬ್‌ ಬೆದರಿಕೆ: ನ್ಯೂಯಾರ್ಕ್‌ಗೆ ಹೊರಟ್ಟಿದ್ದ ವಿಮಾನ ವಾಪಾಸ್‌ ಮುಂಬೈಗೆ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ವಾಪಾಸ್‌ ಬಂದು ಲ್ಯಾಂಡ್‌ ಆಗಿದೆ.

ಏರ್‌ ಇಂಡಿಯಾ ವಿಮಾನವೂ ಇಂದು(ಮಾರ್ಚ್‌.10) ಮುಂಬೈನಿಂದ ನ್ಯೂಯಾರ್ಕ್‌ಗೆ ಹಾರಾಟ ನಡೆಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಸಂಭಾವ್ಯ ಭದ್ರತಾ ಬೆದರಿಕೆಯನ್ನು ಪತ್ತೆಹಚ್ಚಲಾಯಿತು. ಅಗತ್ಯ ಶಿಷ್ಟಾಚಾರಗಳನ್ನು ಅನುಸರಿಸಿದ ಬಳಿಕ ವಿಮಾನದಲ್ಲಿದ್ದ ಎಲ್ಲರ ಸುರಕ್ಷತೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ವಿಮಾನವು ಮುಂಬೈಗೆ ಹಿಂತಿರುಗಿಸಲಾಗಿದೆ. ಅಲ್ಲದೇ ಈ ಘಟನೆಯ ಮುನ್ನ ಅಗತ್ಯವಿರುವ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ವಿಮಾನವನ್ನು ಇಂದು ಬೆಳಿಗ್ಗೆ 10.25 ಗಂಟೆಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ನಂತರ ವಿಮಾನವನ್ನು ಭದ್ರತಾ ಸಂಸ್ಥೆಗಳಿಂದ ಕಡ್ಡಾಯ ತಪಾಸಣೆಗೆ ಒಳಪಡಿಸಲಾಗಿದೆ. ಹೀಗಾಗಿ ರ್ ಇಂಡಿಯಾ ಅಧಿಕಾರಿಗಳಿಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಇನ್ನು ವಿಮಾನದ ವೇಳಾಪಟ್ಟಿಯಲ್ಲಿ ಈ ವಿಮಾನಯಾನಕ್ಕೆ ಮಾರ್ಚ್‌.11 ರಂದು ಬೆಳಿಗ್ಗೆ 5 ಗಂಟೆಗೆ ತೆರಳಲು ಮರು ನಿಗದಿಪಡಿಸಲಾಗಿದೆ. ಅಲ್ಲಿಯವರೆಗೂ ಎಲ್ಲಾ ಪ್ರಯಾಣಿಕರಿಗೂ ಹೋಟೆಲ್‌ ವಸತಿ, ಊಟ ಹಾಗೂ ಇತರೆ ಸಹಾಯವನ್ನು ನೀಡಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago