ದೇಶ- ವಿದೇಶ

ವಾಯುಮಾಲಿನ್ಯ ನಿಗೂಢ ಕೊಲೆಗಾರ, ಇದರಿಂದ ಜನರ ಆರೋಗ್ಯ, ದೇಶದ ಆರ್ಥಿಕತೆ ಮೇಲೆ ಪರಿಣಾಮ: ಕೇರಳ ಹೈಕೋರ್ಟ್

ತಿರುವನಂತಪುರಂ: ವಾಯುಮಾಲಿನ್ಯದ ಗಂಭೀರತೆಯನ್ನು ಒತ್ತಿ ಹೇಳಿರುವ ಕೇರಳ ಹೈಕೋರ್ಟ್‌ ಅದನ್ನು ನಿಯಂತ್ರಸದೇ ಹೋದರೆ ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಿದೆ.

ಆರೋಗ್ಯದ ಮೇಲಷ್ಟೇ ಅಲ್ಲದೆ, ವಾಯು ಮಾಲಿನ್ಯ ರಾಷ್ಟ್ರದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ನ್ಯಾಯಮೂರ್ತಿ ಎನ್ ನಗರೇಶ್ ತಿಳಿಸಿದರು.

ವಾಯುಮಾಲಿನ್ಯ ನಿಗೂಢ ಕೊಲೆಗಾರ. ಭಾರತದಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚು ಎನ್ನಲಾಗುತ್ತಿದೆ. ಧೂಳಿನ ಕಣಗಳಿಗೆ ಒಡ್ಡಿಕೊಳ್ಳುವುದರಿಂದ ಶ್ವಾಸಕೋಶದ ಕ್ಯಾನ್ಸರ್, ಪಾರ್ಶ್ವವಾಯು ಹಾಗೂ ಹೃದ್ರೋಗದಂತಹ ಮಾರಣಾಂತಿಕ ಕಾಯಿಲೆಗಳು ಉಂಟಾಗಬಹುದು. ಮಾಲಿನ್ಯದ ಆರೋಗ್ಯದ ಪರಿಣಾಮಗಳು ರಾಷ್ಟ್ರದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತವೆ. ಕೃಷಿ, ಕೈಗಾರಿಕೆ, ವಿದ್ಯುತ್, ಮನೆಗಳು ಮತ್ತು ಸಾರಿಗೆಯಂತಹ ಕ್ಷೇತ್ರಗಳು ದೂಳಿನ ಕಣ ಹೆಚ್ಚಲು ಕಾರಣ ಎಂದು ನ್ಯಾಯಾಲಯ ಹೇಳಿದೆ.

ಸಂವಿಧಾನದ 47ನೇ ವಿಧಿಯಲ್ಲಿ ಸೂಚಿಸಲಾದ ರಾಜ್ಯ ನಿರ್ದೇಶಕ ತತ್ವ ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಬಹು-ವಲಯ ಮತ್ತು ಬಹು-ನ್ಯಾಯವ್ಯಾಪ್ತಿ ಮಟ್ಟದಲ್ಲಿ ಸಮಸ್ಯೆ ನಿಭಾಯಿಸುವುದು ಅವಶ್ಯಕ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಕೇಂದ್ರ ಸರ್ಕಾರದಿಂದ ಲಿಖಿತವಾಗಿ ಯಾವುದೇ ನಿರ್ದಿಷ್ಟ ನಿರ್ದೇಶನವಿಲ್ಲದೆ ಡೀಸೆಲ್ ಜನರೇಟರ್ ಸೆಟ್‌ಗಳ ಬಳಕೆ ಮೇಲೆ ಯಾವುದೇ ನಿರ್ಬಂಧಿತ ಆದೇಶಗಳನ್ನು ಜಾರಿಗೊಳಿಸದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡುವಂತೆ ಕೋರಿ ಟೆಲಿಕಾಂ ಸೇವಾ ಪೂರೈಕೆದಾರ, ವೊಡಾಫೋನ್ ಐಡಿಯಾ ಮಾಡಿದ ಮನವಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.

ವೊಡಾಫೋನ್ ಐಡಿಯಾದ ಟೆಲಿಕಾಂ ಟವರ್‌ಗಳ ಎನರ್ಜಿ ಸ್ವಿಚಿಂಗ್ ಕೇಂದ್ರಗಳಲ್ಲಿ ಬಳಸಲಾದ ಬ್ಯಾಕ್‌ಅಪ್ ಡೀಸೆಲ್ ಜನರೇಟರ್‌ಗಳನ್ನು 1981ರ ವಾಯು ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯಿದೆಯ ಸೆಕ್ಷನ್ 21ರ ಅಡಿಯಲ್ಲಿ ಕೈಗಾರಿಕಾ ಸ್ಥಾವರ ಎಂದು ಪರಿಗಣಿಸದಂತೆ ವೊಡಾಫೋನ್‌ ವಾದಿಸಿತ್ತು. ಆದರೆ ಇವುಗಳಿಂದ ಭಾರಿ ಪ್ರಮಾಣದಲ್ಲಿ ವಾಯುಮಾಲಿನ್ಯ ಉಂಟಾಗುತ್ತಿದೆ ಎಂಬುದು ಮಾಲಿನ್ಯ ನಿಯಂತ್ರಣ ಮಂಡಳಿಯ ವಾದವಾಗಿದೆ. ಮಂಡಳಿಯ ವಾದವನ್ನು ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಬೆಂಬಲಿಸಿತು.

andolana

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

8 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

9 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago