ದೇಶ- ವಿದೇಶ

ವಾಯುಮಾಲಿನ್ಯ ನಿಗೂಢ ಕೊಲೆಗಾರ, ಇದರಿಂದ ಜನರ ಆರೋಗ್ಯ, ದೇಶದ ಆರ್ಥಿಕತೆ ಮೇಲೆ ಪರಿಣಾಮ: ಕೇರಳ ಹೈಕೋರ್ಟ್

ತಿರುವನಂತಪುರಂ: ವಾಯುಮಾಲಿನ್ಯದ ಗಂಭೀರತೆಯನ್ನು ಒತ್ತಿ ಹೇಳಿರುವ ಕೇರಳ ಹೈಕೋರ್ಟ್‌ ಅದನ್ನು ನಿಯಂತ್ರಸದೇ ಹೋದರೆ ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಿದೆ.

ಆರೋಗ್ಯದ ಮೇಲಷ್ಟೇ ಅಲ್ಲದೆ, ವಾಯು ಮಾಲಿನ್ಯ ರಾಷ್ಟ್ರದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ನ್ಯಾಯಮೂರ್ತಿ ಎನ್ ನಗರೇಶ್ ತಿಳಿಸಿದರು.

ವಾಯುಮಾಲಿನ್ಯ ನಿಗೂಢ ಕೊಲೆಗಾರ. ಭಾರತದಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚು ಎನ್ನಲಾಗುತ್ತಿದೆ. ಧೂಳಿನ ಕಣಗಳಿಗೆ ಒಡ್ಡಿಕೊಳ್ಳುವುದರಿಂದ ಶ್ವಾಸಕೋಶದ ಕ್ಯಾನ್ಸರ್, ಪಾರ್ಶ್ವವಾಯು ಹಾಗೂ ಹೃದ್ರೋಗದಂತಹ ಮಾರಣಾಂತಿಕ ಕಾಯಿಲೆಗಳು ಉಂಟಾಗಬಹುದು. ಮಾಲಿನ್ಯದ ಆರೋಗ್ಯದ ಪರಿಣಾಮಗಳು ರಾಷ್ಟ್ರದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತವೆ. ಕೃಷಿ, ಕೈಗಾರಿಕೆ, ವಿದ್ಯುತ್, ಮನೆಗಳು ಮತ್ತು ಸಾರಿಗೆಯಂತಹ ಕ್ಷೇತ್ರಗಳು ದೂಳಿನ ಕಣ ಹೆಚ್ಚಲು ಕಾರಣ ಎಂದು ನ್ಯಾಯಾಲಯ ಹೇಳಿದೆ.

ಸಂವಿಧಾನದ 47ನೇ ವಿಧಿಯಲ್ಲಿ ಸೂಚಿಸಲಾದ ರಾಜ್ಯ ನಿರ್ದೇಶಕ ತತ್ವ ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಬಹು-ವಲಯ ಮತ್ತು ಬಹು-ನ್ಯಾಯವ್ಯಾಪ್ತಿ ಮಟ್ಟದಲ್ಲಿ ಸಮಸ್ಯೆ ನಿಭಾಯಿಸುವುದು ಅವಶ್ಯಕ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಕೇಂದ್ರ ಸರ್ಕಾರದಿಂದ ಲಿಖಿತವಾಗಿ ಯಾವುದೇ ನಿರ್ದಿಷ್ಟ ನಿರ್ದೇಶನವಿಲ್ಲದೆ ಡೀಸೆಲ್ ಜನರೇಟರ್ ಸೆಟ್‌ಗಳ ಬಳಕೆ ಮೇಲೆ ಯಾವುದೇ ನಿರ್ಬಂಧಿತ ಆದೇಶಗಳನ್ನು ಜಾರಿಗೊಳಿಸದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡುವಂತೆ ಕೋರಿ ಟೆಲಿಕಾಂ ಸೇವಾ ಪೂರೈಕೆದಾರ, ವೊಡಾಫೋನ್ ಐಡಿಯಾ ಮಾಡಿದ ಮನವಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು.

ವೊಡಾಫೋನ್ ಐಡಿಯಾದ ಟೆಲಿಕಾಂ ಟವರ್‌ಗಳ ಎನರ್ಜಿ ಸ್ವಿಚಿಂಗ್ ಕೇಂದ್ರಗಳಲ್ಲಿ ಬಳಸಲಾದ ಬ್ಯಾಕ್‌ಅಪ್ ಡೀಸೆಲ್ ಜನರೇಟರ್‌ಗಳನ್ನು 1981ರ ವಾಯು ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯಿದೆಯ ಸೆಕ್ಷನ್ 21ರ ಅಡಿಯಲ್ಲಿ ಕೈಗಾರಿಕಾ ಸ್ಥಾವರ ಎಂದು ಪರಿಗಣಿಸದಂತೆ ವೊಡಾಫೋನ್‌ ವಾದಿಸಿತ್ತು. ಆದರೆ ಇವುಗಳಿಂದ ಭಾರಿ ಪ್ರಮಾಣದಲ್ಲಿ ವಾಯುಮಾಲಿನ್ಯ ಉಂಟಾಗುತ್ತಿದೆ ಎಂಬುದು ಮಾಲಿನ್ಯ ನಿಯಂತ್ರಣ ಮಂಡಳಿಯ ವಾದವಾಗಿದೆ. ಮಂಡಳಿಯ ವಾದವನ್ನು ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಬೆಂಬಲಿಸಿತು.

andolana

Recent Posts

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

2 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

3 hours ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

5 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

6 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

6 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

6 hours ago