ದೇಶ- ವಿದೇಶ

ವಾಯುಭಾರ ಕುಸಿತ: ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಹೊಸದಿಲ್ಲಿ : ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಕರ್ನಾಟಕ, ತಮಿಳು ನಾಡು, ಆಂಧ್ರಪ್ರದೇಶ, ಒಡಿಶಾಸ ಕರಾವಳಿ ಭಾಗದಲ್ಲಿ ೯೦-೧೦೦ ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಚಂಡಮಾರುತಕ್ಕೆ ಅಂತರರಾಷ್ಟ್ರೀಯ ಸಮುದಾಯದ ಶಿಫಾರಸಿನಂತೆ ಥಾಯ್ಲೆಂಡ್‌ನ ಮೊಂಥಾ ಎಂಬ ಹೆಸರು ಇಡಲಾಗಿದೆ. ಅ.೨೭ರಂದು ಚೆನ್ನೈ, ತಿರುವಲ್ಲೂರು ಮತ್ತು ರಾಣಿಪೇಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನು ಒಂದು ವಾರ ಮಳೆ

ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ಸೋಮವಾರ ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯುವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ.

ಚಂಡಮಾರುತ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ.೨೮ರವರೆಗೂ ಮಳೆ ಮುಂದುವರಿಯಲಿದೆ. ಅ.೨೬ರಿಂದ ೨೮ರವರೆಗೆ ಕರಾವಳಿ ಕರ್ನಾಟಕದ ಭಾಗದಲ್ಲಿ, ಆಂಧ್ರಪ್ರದೇಶದ ರಾಯಲಸೀಮಾ ಪ್ರದೇಶದಲ್ಲಿ ಅ.೨೭ರಿಂದ ಭಾರಿ ಮಳೆಯಾಗಲಿದ್ದು, ಮೊಂತಾ ಚಂಡಮಾರುತ ರಾಜ್ಯದ ಮಚಲೀಪಟ್ಟಣ ಮತ್ತು ಕಾಳಿಂಗಪಟ್ಟಣಂ ಪ್ರದೇಶವನ್ನು ದಾಟಲಿದೆ. ಅ.೨೮ರಂದು ಕಾಕಿನಾಡವನ್ನು ದಾಟಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ವಿಕೋಪ ಎದುರಿಸಲು ಸರ್ವಸನ್ನದ್ಧವಾಗಿವೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

3 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

3 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

5 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

5 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

6 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

7 hours ago