ದೇಶ- ವಿದೇಶ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ: ತಜ್ಞರ ಎಚ್ಚರಿಕೆ ಏನಂದ್ರೆ?

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ ತೀವ್ರವಾಗಿ ಕುಸಿದಿದೆ.

ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳಲ್ಲಿ ಮಾಲಿನ್ಯದ ಮಟ್ಟವು ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ದಟ್ಟವಾದ ಹೊಗೆಯಿಂದಾಗಿ ದೆಹಲಿಯ ಪ್ರದೇಶದಾದ್ಯಂತ ಗೋಚರತೆಯನ್ನು ಕಡಿಮೆ ಮಾಡಿದೆ. ಜೊತೆಗೆ ಉಸಿರಾಟದ ಸ್ಥಿತಿಯನ್ನು ಹದಗೆಡಿಸಿದೆ.

ನಗರದ ಹಲವಾರು ಭಾಗಗಳಲ್ಲಿ ಮಾಲಿನ್ಯದ ಮತ್ತಷ್ಟು ಹದಗೆಟ್ಟಿದ್ದು, ಅಲ್ಲಿ ವಾಯು ಗುಣಮಟ್ಟ ಸೂಚ್ಯಂಕ 400 ಅಂಕವನ್ನು ದಾಟಿದ್ದು, ಇದು ವಿಷಕಾರಿ ಗಾಳಿಯ ಗಂಭೀರತೆಯನ್ನು ಸೂಚಿಸುತ್ತದೆ.

ಇದನ್ನು ಓದಿ: ದೆಹಲಿಯಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ

ಅತ್ಯಂತ ಕಲುಷಿತ ಪ್ರದೇಶಗಳಲ್ಲಿ ವಜೀರ್‌ಪುರ, ಬವಾನಾ, ರೋಹಿಣಿ, ಆರ್‌.ಕೆ.ಪುರ, ದ್ವಾರಕಾ ಸೇರಿದ್ದು, ಇವೆಲ್ಲವೂ ಅಪಾಯಕಾರಿ ಮಟ್ಟದ ಮಾಲಿನ್ಯವನ್ನು ದಾಖಲಿಸಿವೆ.

ಮಂಜು ಹಾಗೂ ಹೊಗೆಯ ಮಿಶ್ರಣದಿಂದಾಗಿ ವಾಯು ಗುಣಮಟ್ಟ ಸಂಪೂರ್ಣ ಹದಗೆಟ್ಟಿದ್ದು, ಬಲವಾದ ವಾಯುವ್ಯ ಗಾಳಿ ಅಥವಾ ಮಳೆ ಇಲ್ಲದಿದ್ದರೆ, ಮುಂಬರುವ ದಿನಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

4 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

6 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

8 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

9 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

12 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

12 hours ago