ದೇಶ- ವಿದೇಶ

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು ಎನ್‌ಸಿಪಿ ನಿರ್ಧರಿಸಿದೆ.

ಇಂದು ಮಧ್ಯಾಹ್ನ ಮುಂಬೈನಲ್ಲಿ ನಡೆಯಲಿರುವ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್‌ ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.

ಆ ಬಳಿಕ ಸುನೇತ್ರಾ ಪವಾರ್‌ ಅವರು ಸಂಜೆ ಐದು ಗಂಟೆಗೆ ರಾಜಭವನದಲಲಿ ನಡೆಯಲಿರುವ ಸಮಾರಂಭದಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಅಜಿತ್‌ ಪವಾರ್‌ ಅವರು ವಹಿಸಿಕೊಂಡಿದ್ದ ಹಣಕಾಸು, ಅಬಕಾರಿ ಹಾಗೂ ಕ್ರೀಡಾ ಸೇರಿದಂತೆ ಪ್ರಮುಖ ಖಾತೆಗಳನ್ನು ಸುನೇತ್ರಾ ಪವಾರ್‌ ಅವರೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

1 hour ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

1 hour ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago