ದೇಶ- ವಿದೇಶ

ತಿಂಗಳಲ್ಲಿ ಎರಡನೇ ಬಾರಿ ಅಪಘಾತಕ್ಕೀಡಾದ ಅಜಿತ್‌ ಕಾರು

ಮ್ಯಾಡ್ರಿಡ್‌: ಸ್ಪೇನ್‌ನ ವೇಲ್ಸೆನಿಯಾದಲ್ಲಿ ನಡೆದ ರೇಸ್‌ ಇವೆಂಟ್‌ನಲ್ಲಿ ತಮಿಳು ನಟ ಅಜಿತ್‌ ಕುಮಾರ್‌ ಅವರ ಕಾರು ಅಪಘಾತಕ್ಕೀಡಾಗಿದೆ.

ಅಜಿತ್‌ ಸ್ಪೇನ್‌ನಲ್ಲಿ ನಡೆದ ರೇಸ್‌ನಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರ ಕಾರು ಇನ್ನೊಂದು ಕಾರಿಗೆ ಡಿಕ್ಕಿಯಾಗಿ, ಹಲವಾರು ಬಾರಿ ಪಲ್ಟಿಯಾಗಿ ನಿಂತಿದೆ. ಅಜಿತ್‌ ಅವರ ವ್ಯವಸ್ಥಾಪಕ ಸುರೇಶ ಚಂದ್ರ ಈ ಅಪಘಾತದ ವಿಡಿಯೋವನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಕೆಲ ವಾರಗಳ ಹಿಂದಷ್ಟೆ ರೇಸ್‌ ಟ್ರ್ಯಾಕ್‌ನಲ್ಲಿ ಅಜಿತ್‌ ಅವರ ಕಾರು ಅಪಘಾತಕ್ಕೀಡಾಗಿತ್ತು. ಇದೀಗ ಎರಡನೇ ಬಾರಿ ಮತ್ತೊಮ್ಮೆ ಅವರ ಕಾರು ಅಪಘಾತಕ್ಕೆ ಈಡಾಗಿದೆ.

ರೇಸ್‌ನಲ್ಲಿ 5ನೇ ಸುತ್ತಿನವರೆಗೂ ಚೆನ್ನಾಗಿಯೇ ಕಾರು ಓಡಿಸಿದ ಅಜಿತ್‌ 14ನೇ ಸ್ಥಾನದಲ್ಲಿದ್ದರು. 6ನೇ ಸುತ್ತಿನಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ಮೊದಲ ಬಾರಿಗೆ ಅವರ ಕಾರು ಅಪಘಾತವಾದಾಗ ಚೆನ್ನಾಗಿಯೆ ಇದ್ದರು. ಎರಡನೇ ಬಾರಿ ಅಪಘಾತ ಸಂಭವಿಸಿದಾಗ ಅವರ ಕಾರು ಪಲ್ಟಿಯಾಯಿತು. ನಂತರ ಮತ್ತೆ ಅವರು ರೇಸ್‌ ಮುಂದುವರಿಸಿದರು.

ಸಿನಿಮಾಗಳ ವಿಷಯಕ್ಕೆ ಬಂದರೆ ಅಜಿತ್‌ ʼಗುಡ್‌ ಬ್ಯಾಡ್‌ ಅಂಡ್‌ ಅಗ್ಲಿʼ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿ ನಟಿಸುತ್ತಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

5 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

20 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

2 hours ago