ದೇಶ- ವಿದೇಶ

ತಿಂಗಳಲ್ಲಿ ಎರಡನೇ ಬಾರಿ ಅಪಘಾತಕ್ಕೀಡಾದ ಅಜಿತ್‌ ಕಾರು

ಮ್ಯಾಡ್ರಿಡ್‌: ಸ್ಪೇನ್‌ನ ವೇಲ್ಸೆನಿಯಾದಲ್ಲಿ ನಡೆದ ರೇಸ್‌ ಇವೆಂಟ್‌ನಲ್ಲಿ ತಮಿಳು ನಟ ಅಜಿತ್‌ ಕುಮಾರ್‌ ಅವರ ಕಾರು ಅಪಘಾತಕ್ಕೀಡಾಗಿದೆ.

ಅಜಿತ್‌ ಸ್ಪೇನ್‌ನಲ್ಲಿ ನಡೆದ ರೇಸ್‌ನಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರ ಕಾರು ಇನ್ನೊಂದು ಕಾರಿಗೆ ಡಿಕ್ಕಿಯಾಗಿ, ಹಲವಾರು ಬಾರಿ ಪಲ್ಟಿಯಾಗಿ ನಿಂತಿದೆ. ಅಜಿತ್‌ ಅವರ ವ್ಯವಸ್ಥಾಪಕ ಸುರೇಶ ಚಂದ್ರ ಈ ಅಪಘಾತದ ವಿಡಿಯೋವನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಕೆಲ ವಾರಗಳ ಹಿಂದಷ್ಟೆ ರೇಸ್‌ ಟ್ರ್ಯಾಕ್‌ನಲ್ಲಿ ಅಜಿತ್‌ ಅವರ ಕಾರು ಅಪಘಾತಕ್ಕೀಡಾಗಿತ್ತು. ಇದೀಗ ಎರಡನೇ ಬಾರಿ ಮತ್ತೊಮ್ಮೆ ಅವರ ಕಾರು ಅಪಘಾತಕ್ಕೆ ಈಡಾಗಿದೆ.

ರೇಸ್‌ನಲ್ಲಿ 5ನೇ ಸುತ್ತಿನವರೆಗೂ ಚೆನ್ನಾಗಿಯೇ ಕಾರು ಓಡಿಸಿದ ಅಜಿತ್‌ 14ನೇ ಸ್ಥಾನದಲ್ಲಿದ್ದರು. 6ನೇ ಸುತ್ತಿನಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ಮೊದಲ ಬಾರಿಗೆ ಅವರ ಕಾರು ಅಪಘಾತವಾದಾಗ ಚೆನ್ನಾಗಿಯೆ ಇದ್ದರು. ಎರಡನೇ ಬಾರಿ ಅಪಘಾತ ಸಂಭವಿಸಿದಾಗ ಅವರ ಕಾರು ಪಲ್ಟಿಯಾಯಿತು. ನಂತರ ಮತ್ತೆ ಅವರು ರೇಸ್‌ ಮುಂದುವರಿಸಿದರು.

ಸಿನಿಮಾಗಳ ವಿಷಯಕ್ಕೆ ಬಂದರೆ ಅಜಿತ್‌ ʼಗುಡ್‌ ಬ್ಯಾಡ್‌ ಅಂಡ್‌ ಅಗ್ಲಿʼ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿ ನಟಿಸುತ್ತಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

2 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

2 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

2 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

2 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

2 hours ago