ಮುಂಬೈ: ಭಾರತೀಯ ಷೇರುಪೇಟೆಯ ‘ವಾರನ್ ಬಫೆಟ್’ ಎಂದು ಖ್ಯಾತರಾಗಿರುವ ರಾಕೇಶ್ ಜುಂಜುನ್ವಾಲಾ ಪ್ರವರ್ತಕರಾಗಿರುವ ‘ಆಕಾಶ ಏರ್’ ಕಂಪನಿಯ ಮೊದಲ ವಿಮಾನವು ಭಾನುವಾರ ಮುಂಬೈನ ಛದ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ವಿಮಾನ ಸಂಚಾರಕ್ಕೆ ಚಾಲನೆ ನೀಡಿದರು.
QP ಏರ್ಲೈನ್ ಕೋಡ್ನಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಕಂಪನಿಯು ಕಳೆದ ಜುಲೈ 7ರಂದು ನಾಗರಿಕ ವಿಮಾನಯಾನಗಳ ಮಹಾ ನಿರ್ದೇಶಕರ ಕಚೇರಿಯಿಂದ (Directorate General of Civil Aviation – DGCA) ವಿಮಾನ ಸಂಚಾರಕ್ಕೆ ಅನುಮತಿ ಪಡೆದುಕೊಂಡಿತ್ತು. ಮುಂಬೈ-ಅಹಮದಾಬಾದ್ ಮತ್ತು ಬೆಂಗಳೂರು-ಕೊಚ್ಚಿ ಮಾರ್ಗಗಳಲ್ಲಿ ಆಕಾಶ ಏರ್ಲೈನ್ಸ್ನ ವಿಮಾನಗಳು ಸಂಚರಿಸಲಿದೆ. ಬೆಂಗಳೂರು-ಕೊಚ್ಚಿ ಮಾರ್ಗದಲ್ಲಿ ಆಗಸ್ಟ್ 13ರಿಂದ ವಿಮಾನ ಸಂಚಾರವನ್ನು ಕಂಪನಿ ಆರಂಭಿಸಲಿದೆ. ಬೆಂಗಳೂರಿನಿಂದ ಕೊಚ್ಚಿಗೆ ಬೆಳಿಗ್ಗೆ 7.15 ಮತ್ತು 11 ಗಂಟೆಗೆ ವಿಮಾನಗಳು ಟೇಕಾಫ್ ಆಗಲಿವೆ. ಕೊಚ್ಚಿಯಿಂದ ಬೆಂಗಳೂರಿಗೆ ಬರುವ ವಿಮಾನಗಳು ಬೆಳಿಗ್ಗೆ 10.25 ಮತ್ತು ಮಧ್ಯಾಹ್ನ 2.15ಕ್ಕೆ ಟೇಕಾಫ್ ಆಗಲಿವೆ.
ಆಗಸ್ಟ್ 19ರಿಂದ ಬೆಂಗಳೂರು-ಮುಂಬೈ, ಸೆಪ್ಟೆಂಬರ್ 15ರಿಂದ ಚೆನ್ನೈ-ಮುಂಬೈ ಮಾರ್ಗದಲ್ಲಿ ಆಕಾಶ ಏರ್ಲೈನ್ಸ್ ವಿಮಾನಗಳು ಸಂಚರಿಸಲಿವೆ. ಆಕಾಶ್ ಏರ್ಲೈನ್ಸ್ ನವೆಂಬರ್ 26, 2021ರಂದು 72 ಮ್ಯಾಕ್ಸ್ ವಿಮಾನಗಳನ್ನು ಖರೀದಿಸಲು ಬೋಯಿಂಗ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಜೂನ್ ವೇಳೆಗೆ ಮೊದಲ ವಿಮಾನ ವಿತರಣೆಯನ್ನು ನಿರೀಕ್ಷಿಸಲಾಗಿದೆ. ಸಾಮಾಜಿಕ-ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಎಲ್ಲಾ ಭಾರತೀಯ ವಿಮಾನಯಾನ ಮಾಡುವವರಿಗೆ ಹೊಂದಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವ ಗುರಿಯನ್ನು ಈ ಬ್ರಾಂಡ್ ಹೊಂದಿದೆ. ಐದು ದಿನಗಳ ದುಬೈ ಏರ್ ಶೋನಲ್ಲಿ ಬೋಯಿಂಗ್ ಜೊತೆಗಿನ ಕಂಪನಿಯ ಇತ್ತೀಚಿನ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ.
ವಿಮಾನಯಾನ ಸಂಸ್ಥೆಯು ದೇಶದಲ್ಲೇ ಅತ್ಯಂತ ಅಗ್ಗದ ವಿಮಾನಯಾನ ದರವನ್ನು ಹೊಂದಿರಲಿದೆ ಎಂಬ ಭರವಸೆ ನೀಡಿದೆ. ಆದ್ದರಿಂದ ಇದು ನಿಮ್ಮ ಆಕಾಶ ಟ್ಯಾಗ್ಲೈನ್ ಅನ್ನು ಇಟ್ಟುಕೊಂಡಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…