ದೇಶ- ವಿದೇಶ

ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕರಾಗಿ ಆಕಾಶ್‌ ಆನಂದ್‌ ನೇಮಕ

ಲಕ್ನೋ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್‌ ಆನಂದ್‌ ಮತ್ತೊಮ್ಮೆ ರಾಜಕೀಯಕ್ಕೆ ಮರಳಿದ್ದಾರೆ. ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಆಕಾಶ್‌ ಆನಂದ್‌ ಪಕ್ಷದ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಪ್ರಸ್ತುತ ಈಗ ಬಿಎಸ್‌ಪಿಯಲ್ಲಿ ಮೂವರು ರಾಷ್ಟ್ರೀಯ ಸಂಯೋಜಕರನ್ನು ನೇಮಕ ಮಾಡಲಾಗಿದೆ.

ಇದಕ್ಕೂ ಮೊದಲು ಮಾಯಾವತಿ ತಮ್ಮ ಸೋದರಳಿಯ ಆಕಾಶ್‌ ಆನಂದ್‌ ಮತ್ತು ಅವರ ಮಾವ ಅಶೋಕ್‌ ಸಿದ್ಧಾರ್ಥ್‌ ಅವರನ್ನು ಅಶಿಸ್ತಿನ ಆರೋಪದ ಮೇಲೆ ಪಕ್ಷದಿಂದ ಹೊರಹಾಕಿದ್ದರು. ಇದೀಗ ಆಕಾಶ್‌ಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿದ್ದು, ಪಕ್ಷ ಸಂಘಟನೆಗಾಗಿ ಈ ನಿರ್ಧಾರ ಎಂದು ಮಾಯಾವತಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಯಾವತಿ ಅವರು, ಭವಿಷ್ಯದಲ್ಲಿ ಯಾರನ್ನೂ ತಮ್ಮ ಉತ್ತರಾಧಿಕಾರಿಯಾಗಿ ನೇಮಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

29 seconds ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

49 mins ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

55 mins ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

1 hour ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

2 hours ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

2 hours ago