ದೇಶ- ವಿದೇಶ

ಸೊಮಾಲಿಯಾದಲ್ಲಿ ಆತ್ಮಾಹುತಿ ಬಾಂಬ್‌ ದಾಳಿಗೆ 32 ಮಂದಿ ಸಾವು

ಸೊಮಾಲಿಯಾ: ಅಲ್-ಶಬಾಬ್‌ ಆತ್ಮಾಹುತಿ ಬಾಂಬರ್‌ ಮತ್ತು ಬಂದೂಕುಧಾರಿಗಳು ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆಸಿದ್ದಾರೆ.

ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 32 ಮಂದಿ ಸಾವನ್ನಪ್ಪಿದ್ದು, 63ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರಲ್ಲೂ ಹಲವರ ಸ್ಥಿತಿ ಗಂಭೀರವಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಲ್‌ಖೈದಾ ಬೆಂಬಲಿತ ಜಿಹಾದಿಗಳು ಫೆಡರಲ್‌ ಸರ್ಕಾರದ ವಿರುದ್ಧ ದಂಗೆ ನಡೆಸುತ್ತಿದ್ದಾರೆ. ಅಲ್ಲಿ ಜನಪ್ರಿಯವಾಗಿರುವ ಲಿಡೋ ಬೀಚ್‌ ಪ್ರದೇಶವನ್ನು ಆಗಿನಿಂದಲೂ ಗುರಿಯಾಗಿಸಿಕೊಂಡಿದ್ದಾರೆ.

ಅಲ್-ಶಬಾಬ್‌ ಆತ್ಮಾಹುತಿ ಬಾಂಬರ್‌ ಮತ್ತು ಬಂದೂಕುಧಾರಿಗಳು ನಡೆಸಿದ ಆತ್ಮಾಹುತಿ ಬಾಂಬ್‌ ದಾಳಿಯಿಂದ 32 ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌ ವಕ್ತಾರ ಅಬ್ದಿಫತಾ ಆದಾನ್‌ ಹಸನ್‌ ಮಾಹಿತಿ ನೀಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಅಲ್-ಶಬಾಬ್‌ ಹೊಣೆಗಾರಿಕೆ ಹೊತ್ತುಕೊಂಡಿದ್ದು, ಆತ್ಮಾಹುತಿ ಬಾಂಬರ್‌ ಸಾಧನವನ್ನು ಸ್ಫೋಟಿಸಿದಾಗ ಬಂದೂಕುಧಾರಿಗಳು ಈ ಪ್ರದೇಶಕ್ಕೆ ನುಗ್ಗಿದ್ದರು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

8 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

12 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

12 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 hours ago