All banks closed tomorrow No transactions will take place
ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ನಾಳೆ ಬ್ಯಾಂಕ್ ನೌಕರರ ಸಂಘಟನೆಗಳು ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಿವೆ.
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರ ನಡೆಯಲಿದ್ದು, ಇದರಿಂದಾಗಿ ದೇಶದಾದ್ಯಂತ ಬ್ಯಾಂಕ್ ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ. ಗ್ರಾಹಕರು ಬ್ಯಾಂಕ್ ಸೇವೆಗಳನ್ನು ಪಡೆಯಲು ಕಷ್ಟಪಡಬೇಕಾಗಬಹುದು.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಗಳು ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರವನ್ನು ತಪ್ಪಿಸಲು ಬ್ಯಾಂಕ್ ನೌಕರರ ಸಂಘಟನೆಗಳೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿದ್ದು, ಅನಿವಾರ್ಯವಾಗಿ ಮುಷ್ಕರಕ್ಕೆ ಕರೆ ಕೊಟ್ಟಿವೆ.
ದೇಶದಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ಅಥವಾ ಭಾರತ್ ಬಂದ್ನಲ್ಲಿ ಭಾಗವಹಿಸಲಿದ್ದಾರೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಕರೆ ನೀಡಿರುವ ಈ ಮುಷ್ಕರ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ಪ್ರತಿಭಟಿಸುವ ಗುರಿಯನ್ನು ಹೊಂದಿದೆ.
ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…