ದೇಶ- ವಿದೇಶ

ನಾಳೆ ರಾಷ್ಟ್ರವ್ಯಾಪಿ ಎಲ್ಲಾ ಬ್ಯಾಂಕ್‌ಗಳು ಬಂದ್:‌ ಯಾವುದೇ ವಹಿವಾಟು ನಡೆಯೋಲ್ಲ

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ನಾಳೆ ಬ್ಯಾಂಕ್ ನೌಕರರ ಸಂಘಟನೆಗಳು ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಿವೆ.

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರ ನಡೆಯಲಿದ್ದು, ಇದರಿಂದಾಗಿ ದೇಶದಾದ್ಯಂತ ಬ್ಯಾಂಕ್ ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ. ಗ್ರಾಹಕರು ಬ್ಯಾಂಕ್ ಸೇವೆಗಳನ್ನು ಪಡೆಯಲು ಕಷ್ಟಪಡಬೇಕಾಗಬಹುದು.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಗಳು ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರವನ್ನು ತಪ್ಪಿಸಲು ಬ್ಯಾಂಕ್ ನೌಕರರ ಸಂಘಟನೆಗಳೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿದ್ದು, ಅನಿವಾರ್ಯವಾಗಿ ಮುಷ್ಕರಕ್ಕೆ ಕರೆ ಕೊಟ್ಟಿವೆ.

ದೇಶದಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ಅಥವಾ ಭಾರತ್ ಬಂದ್‍ನಲ್ಲಿ ಭಾಗವಹಿಸಲಿದ್ದಾರೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಕರೆ ನೀಡಿರುವ ಈ ಮುಷ್ಕರ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ಪ್ರತಿಭಟಿಸುವ ಗುರಿಯನ್ನು ಹೊಂದಿದೆ.

ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

3 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

16 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

17 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

17 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

17 hours ago