ನವದೆಹಲಿ: ಟೀಮ್ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ನೇ ನಿವೃತ್ತಿ ಘೋಷಿಸಿದ್ದಾರೆ.
ಆರ್.ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಇಂದು(ಡಿಸೆಂಬರ್.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಾನು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದರೆ ನಾನು ಐಪಿಎಲ್ ಪಂದ್ಯಗಳಲ್ಲಿ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.
ಆರ್.ಅಶ್ವಿನ್ 2010ರಲ್ಲಿ ಅಂತಾರಾಷ್ಟ್ರೀಯ ಕಿಕ್ರೆಟ್ಗೆ ಪಾದಾರ್ಪಣೆ ಮಾಡಿದ್ದು, ಟೆಸ್ಟ್ ಕ್ರಿಕೆಟ್ನಲ್ಲಿ ಅನಿಲ್ ಕುಂಬ್ಳೆ(619) ಅವರ ನಂತರ ಅತಿ ಹೆಚ್ಚು ವಿಕೆಟ್ ಪಡೆದಿರುವ ಸಾಧನೆಯ ಪೈಕಿಯಲ್ಲಿ ದಾಖಲಾಗಿದ್ದಾರೆ. ಅಲ್ಲದೇ ಅಶ್ವಿನ್ ಭಾರತದ ಪರ 106 ಟೆಸ್ಟ್, 116 ಏಕದಿನ ಹಾಗೂ 65 ಟಿ-20 ಪಂದ್ಯಗಳನ್ಬು ಆಡಿದ್ದಾರೆ.
ಆಲ್ರೌಂಡರ್ ಆಗಿರುವ ಅಶ್ವಿನ್(38) ಕೊನೆಯ ಬಾರಿ ಏಕದಿನ ಪಂದ್ಯವನ್ನು ಆಡಿದ್ದು 2023ರಲ್ಲಿ. ಇದಾದ ನಂತರ ಅವರು ಭಾರತ ಏಕದಿನ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಅಲ್ಲದೇ 2022ರಲ್ಲಿ ಕೊನೆಯದಾಗಿ ಟಿ-20 ಪಂದ್ಯವಾಡಿ, ಟೀಂ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದರು. ಆದರೆ ಇದೀಗ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…