ಹೊಸದಿಲ್ಲಿ: ಕೆನಡಾದಲ್ಲಿ ಖಲಿಸ್ತಾನ್ ಮುಖಂಡನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪಗಳಿಗೆ ಯಾವುದೇ ಪುರಾವೆಗಳು ಇಲ್ಲ ಎಂದು ಕೆನಡಾ ಸರ್ಕಾರ ಸ್ಪಷ್ಟನೆ ನೀಡಿದೆ.
ಖಲಿಸ್ತಾನ್ ಪ್ರತ್ಯೇಕವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಾಗೂ ಕೆನಡಾ ದೇಶದ ಅಪರಾಧ ಚಟುವಟಿಕೆಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಮೀಲಾಗಿದ್ದಾರೆ ಎಂಬ ಆರೋಪಕ್ಕೆ ಬಲವಾದ ಸಾಕ್ಷಿ ಪುರಾವೆಗಳು ಇರಲಿಲ್ಲ ಎಂದು ಕೆನಾಡ ಪ್ರಧಾನಿ ಜಸ್ಟಿನ್ ಟ್ರುಡೊ ಈಚೆಗೆ ಒಪ್ಪಿಕೊಂಡಿದ್ದರು. ಆದರೆ ಗುಪ್ತಚರ ಮಾಹಿತಿ ಮಾತ್ರ ಇತ್ತು ಎಂದು ಅವರು ಹೇಳಿದ್ದರು.
ವಿದೇಶಿ ಶಕ್ತಿಗಳ ಹಸ್ತಕ್ಷೇಪ ಕುರಿತ ಇತ್ತೀಚಿನ ವಿಚಾರಣೆಗೆ ಹಾಜರಾಗಿದ್ದ ಟ್ರುಡೊ, ಭಾರತದ ರಾಜತಾಂತ್ರಿಕರು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕುರಿತು ಭಿನ್ನಾಭಿಪ್ರಾಯ ಹೊಂದಿರುವ ಕೆನಡಾ ಪ್ರಜೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆ ಮಾಹಿತಿಯನ್ನು ಅವರು ಭಾರತ ಸರ್ಕಾರದ ಅತ್ಯುನ್ನತ ಹಂತಗಳಲ್ಲಿ ಇರುವವರಿಗೆ ಹಾಗೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಂಹತ ಕ್ರಿಮಿನಲ್ ಸಂಘಟನೆಗಳಿಗೆ ರವಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…