ದೇಶ- ವಿದೇಶ

‘ಕಾಂತಾರ – ಚಾಪ್ಟರ್ 1’ರ ಜೊತೆಗೆ ‘ಕೋಣ’ ಚಿತ್ರದ ಟ್ರೇಲರ್ …

ಕೋಮಲ್ ಬ್ಯಾಕ್‍ ಟು ಬ್ಯಾಕ್‍ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ ಕುನ್ನಿ’ ಚಿತ್ರ ಹೆಚ್ಚು ಪ್ರಚಾರವಿಲ್ಲದೆ ಬಿಡುಗಡೆಯಾಗಿತ್ತು. ಇದೀಗ ಅವರ ಇನ್ನೊಂದು ಚಿತ್ರ ‘ಕೋಣ’ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿದೆ.

ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್‍ ಈಗಾಗಲೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದ್ದು, ಅಕ್ಟೋಬರ್ 02ರಂದು ‘ಕಾಂತಾರ – ಚಾಪ್ಟರ್ 1’ ಚಿತ್ರವು ಬಿಡುಗಡೆಯಾಗುತ್ತಿದ್ದು, ಆ ಚಿತ್ರದ ಜೊತೆಗೆ ಟ್ರೇಲರ್‍ ಚಿತ್ರಮಂದರಗಳಲ್ಲೂ ಬಿಡುಗಡೆಯಾಗಿವೆ.

ಇದನ್ನು ಓದಿ : ದಾಖಲೆಯ 7000 ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ

ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದ್ದು ತೆರೆಗೆ ಬರಲು ಸಿದ್ಧವಾಗಿದೆ. ಕೋಮಲ್ ಕುಮಾರ್ ಇದುವರೆಗೂ ಕಾಣಿಸಿಕೊಂಡಿರದ ಪಾತ್ರವನ್ನು ‘ಕೋಣ’ ಸಿನಿಮಾದಲ್ಲಿ ನಿಭಾಯಿಸಿದ್ದಾರೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಇಲ್ಲಿ ಕೋಮಲ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ.

ಈ ಚಿತ್ರದಲ್ಲಿ ಕೋಮಲ್‍ಗೆ ನಾಯಕಿಯಾಗಿ ತನಿಷಾ ಕುಪ್ಪಂಡ ನಟಿಸುತ್ತಿದ್ದು, ಮಿಕ್ಕಂತೆ ಕೀರ್ತಿರಾಜ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ಜಗ್ಗಪ್ಪ ಮುಂತಾದವರು ನಟಿಸಿದ್ದಾರೆ.

ಈ ಹಿಂದೆ ಜಗ್ಗೇಶ್ ನಟನೆಯ ‘8 MM’ ಚಿತ್ರವನ್ನು ನಿರ್ದೇಶಿಸಿದ್ದ ಎಸ್. ಹರಿಕೃಷ್ಣ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್ ಮತ್ತು ರವಿಕಿರಣ್ ಈ ಚಿತ್ರವನ್ನು ನಿರ್ಮಿಸಿದ್ದು, ಶಶಾಂಕ್ ಶೇಷಗಿರಿ ಸಂಗೀತ ಮತ್ತು ವೀನಸ್ ನಾಗರಾಜ ಮೂರ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

47 mins ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

51 mins ago

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…

53 mins ago

ಓದುಗರ ಪತ್ರ: ನದಿ ತೀರದಲ್ಲಿ ಸ್ವಚ್ಛತೆ ಕಾಪಾಡಿ

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ…

55 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

4 hours ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

4 hours ago