ದೇಶ- ವಿದೇಶ

‘ಕಾಂತಾರ – ಚಾಪ್ಟರ್ 1’ರ ಜೊತೆಗೆ ‘ಕೋಣ’ ಚಿತ್ರದ ಟ್ರೇಲರ್ …

ಕೋಮಲ್ ಬ್ಯಾಕ್‍ ಟು ಬ್ಯಾಕ್‍ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ ಕುನ್ನಿ’ ಚಿತ್ರ ಹೆಚ್ಚು ಪ್ರಚಾರವಿಲ್ಲದೆ ಬಿಡುಗಡೆಯಾಗಿತ್ತು. ಇದೀಗ ಅವರ ಇನ್ನೊಂದು ಚಿತ್ರ ‘ಕೋಣ’ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿದೆ.

ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್‍ ಈಗಾಗಲೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದ್ದು, ಅಕ್ಟೋಬರ್ 02ರಂದು ‘ಕಾಂತಾರ – ಚಾಪ್ಟರ್ 1’ ಚಿತ್ರವು ಬಿಡುಗಡೆಯಾಗುತ್ತಿದ್ದು, ಆ ಚಿತ್ರದ ಜೊತೆಗೆ ಟ್ರೇಲರ್‍ ಚಿತ್ರಮಂದರಗಳಲ್ಲೂ ಬಿಡುಗಡೆಯಾಗಿವೆ.

ಇದನ್ನು ಓದಿ : ದಾಖಲೆಯ 7000 ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ

ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದ್ದು ತೆರೆಗೆ ಬರಲು ಸಿದ್ಧವಾಗಿದೆ. ಕೋಮಲ್ ಕುಮಾರ್ ಇದುವರೆಗೂ ಕಾಣಿಸಿಕೊಂಡಿರದ ಪಾತ್ರವನ್ನು ‘ಕೋಣ’ ಸಿನಿಮಾದಲ್ಲಿ ನಿಭಾಯಿಸಿದ್ದಾರೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಇಲ್ಲಿ ಕೋಮಲ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ.

ಈ ಚಿತ್ರದಲ್ಲಿ ಕೋಮಲ್‍ಗೆ ನಾಯಕಿಯಾಗಿ ತನಿಷಾ ಕುಪ್ಪಂಡ ನಟಿಸುತ್ತಿದ್ದು, ಮಿಕ್ಕಂತೆ ಕೀರ್ತಿರಾಜ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ಜಗ್ಗಪ್ಪ ಮುಂತಾದವರು ನಟಿಸಿದ್ದಾರೆ.

ಈ ಹಿಂದೆ ಜಗ್ಗೇಶ್ ನಟನೆಯ ‘8 MM’ ಚಿತ್ರವನ್ನು ನಿರ್ದೇಶಿಸಿದ್ದ ಎಸ್. ಹರಿಕೃಷ್ಣ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್ ಮತ್ತು ರವಿಕಿರಣ್ ಈ ಚಿತ್ರವನ್ನು ನಿರ್ಮಿಸಿದ್ದು, ಶಶಾಂಕ್ ಶೇಷಗಿರಿ ಸಂಗೀತ ಮತ್ತು ವೀನಸ್ ನಾಗರಾಜ ಮೂರ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

15 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

21 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

27 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago