ದೇಶ- ವಿದೇಶ

‘ಕಾಂತಾರ – ಚಾಪ್ಟರ್ 1’ರ ಜೊತೆಗೆ ‘ಕೋಣ’ ಚಿತ್ರದ ಟ್ರೇಲರ್ …

ಕೋಮಲ್ ಬ್ಯಾಕ್‍ ಟು ಬ್ಯಾಕ್‍ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ ಕುನ್ನಿ’ ಚಿತ್ರ ಹೆಚ್ಚು ಪ್ರಚಾರವಿಲ್ಲದೆ ಬಿಡುಗಡೆಯಾಗಿತ್ತು. ಇದೀಗ ಅವರ ಇನ್ನೊಂದು ಚಿತ್ರ ‘ಕೋಣ’ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿದೆ.

ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್‍ ಈಗಾಗಲೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದ್ದು, ಅಕ್ಟೋಬರ್ 02ರಂದು ‘ಕಾಂತಾರ – ಚಾಪ್ಟರ್ 1’ ಚಿತ್ರವು ಬಿಡುಗಡೆಯಾಗುತ್ತಿದ್ದು, ಆ ಚಿತ್ರದ ಜೊತೆಗೆ ಟ್ರೇಲರ್‍ ಚಿತ್ರಮಂದರಗಳಲ್ಲೂ ಬಿಡುಗಡೆಯಾಗಿವೆ.

ಇದನ್ನು ಓದಿ : ದಾಖಲೆಯ 7000 ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ

ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದ್ದು ತೆರೆಗೆ ಬರಲು ಸಿದ್ಧವಾಗಿದೆ. ಕೋಮಲ್ ಕುಮಾರ್ ಇದುವರೆಗೂ ಕಾಣಿಸಿಕೊಂಡಿರದ ಪಾತ್ರವನ್ನು ‘ಕೋಣ’ ಸಿನಿಮಾದಲ್ಲಿ ನಿಭಾಯಿಸಿದ್ದಾರೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಇಲ್ಲಿ ಕೋಮಲ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ.

ಈ ಚಿತ್ರದಲ್ಲಿ ಕೋಮಲ್‍ಗೆ ನಾಯಕಿಯಾಗಿ ತನಿಷಾ ಕುಪ್ಪಂಡ ನಟಿಸುತ್ತಿದ್ದು, ಮಿಕ್ಕಂತೆ ಕೀರ್ತಿರಾಜ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ಜಗ್ಗಪ್ಪ ಮುಂತಾದವರು ನಟಿಸಿದ್ದಾರೆ.

ಈ ಹಿಂದೆ ಜಗ್ಗೇಶ್ ನಟನೆಯ ‘8 MM’ ಚಿತ್ರವನ್ನು ನಿರ್ದೇಶಿಸಿದ್ದ ಎಸ್. ಹರಿಕೃಷ್ಣ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್ ಮತ್ತು ರವಿಕಿರಣ್ ಈ ಚಿತ್ರವನ್ನು ನಿರ್ಮಿಸಿದ್ದು, ಶಶಾಂಕ್ ಶೇಷಗಿರಿ ಸಂಗೀತ ಮತ್ತು ವೀನಸ್ ನಾಗರಾಜ ಮೂರ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

24 mins ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

2 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

4 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

5 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

6 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

6 hours ago