ಶ್ರೀನಗರ : ಭಾರೀ ಮಳೆಯಿಂದಾಗಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಳೆದ ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಹೀಗಾಗಿ ಯಾತಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದುವರೆಗೂ ೧ ಲಕ್ಷದ ೫೦ ಕ್ಕೂ ಹೆಚ್ಚು ಮಂದಿ ಭಕ್ತರು ೩೮೦೦ ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ಲಿಂಗ ದರ್ಶನ ಮಾಡಿದ್ದಾರೆ.
ಆಗಸ್ಟ್ ೧೯ ರವರೆಗೆ ಯಾತ್ರೆ ಮುಂದುವರಿಯಲಿದ್ದು, ಮೊದಲ ವಾರದಲ್ಲಿ ೧.೫೦ ಲಕ್ಷಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದರು. ಆದರೆ ಗುಹೆಯಲ್ಲಿ ಮಂಜುಗಡ್ಡೆಯ ಶಿವಲಿಂಗವು ಸಂಪೂರ್ಣವಾಗಿ ಕರಗಿದ ಕಾರಣ ಈಗಷ್ಟೆ ಬಂದಿರುವ ಯಾತ್ರಿಕರು ನಿರಾಸೆಗೊಂಡಿದ್ದಾರೆ. ಕಳೆದ ಒಂದು ವಾರದಿಂದ ಅತೀ ಹೆಚ್ಚು ತಾಪಮಾನದಿಂದಾಗಿ ಶಿವಲಿಂಗ ಕರಗುವ ಪ್ರಕ್ರಿಯೆ ವೇಗಗೊಂಡಿದೆ. ೨೦೦೮ ರ ನಂತ್ರ ಯಾತ್ರೆಯ ಮೊದಲ ೧೦ ದಿನಗಳಲ್ಲಿ ಮಂಜುಗಡ್ಡೆಯ ಶಿವಲಿಂಗವು ಸಂಪೂರ್ಣವಾಗಿ ಕಣ್ಮರೆಯಾಗಿರುವುದು ಇದೇ ಮೊದಲ ಬಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…