ಶ್ರೀನಗರ : ಭಾರೀ ಮಳೆಯಿಂದಾಗಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಳೆದ ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಹೀಗಾಗಿ ಯಾತಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದುವರೆಗೂ ೧ ಲಕ್ಷದ ೫೦ ಕ್ಕೂ ಹೆಚ್ಚು ಮಂದಿ ಭಕ್ತರು ೩೮೦೦ ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ಲಿಂಗ ದರ್ಶನ ಮಾಡಿದ್ದಾರೆ.
ಆಗಸ್ಟ್ ೧೯ ರವರೆಗೆ ಯಾತ್ರೆ ಮುಂದುವರಿಯಲಿದ್ದು, ಮೊದಲ ವಾರದಲ್ಲಿ ೧.೫೦ ಲಕ್ಷಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದರು. ಆದರೆ ಗುಹೆಯಲ್ಲಿ ಮಂಜುಗಡ್ಡೆಯ ಶಿವಲಿಂಗವು ಸಂಪೂರ್ಣವಾಗಿ ಕರಗಿದ ಕಾರಣ ಈಗಷ್ಟೆ ಬಂದಿರುವ ಯಾತ್ರಿಕರು ನಿರಾಸೆಗೊಂಡಿದ್ದಾರೆ. ಕಳೆದ ಒಂದು ವಾರದಿಂದ ಅತೀ ಹೆಚ್ಚು ತಾಪಮಾನದಿಂದಾಗಿ ಶಿವಲಿಂಗ ಕರಗುವ ಪ್ರಕ್ರಿಯೆ ವೇಗಗೊಂಡಿದೆ. ೨೦೦೮ ರ ನಂತ್ರ ಯಾತ್ರೆಯ ಮೊದಲ ೧೦ ದಿನಗಳಲ್ಲಿ ಮಂಜುಗಡ್ಡೆಯ ಶಿವಲಿಂಗವು ಸಂಪೂರ್ಣವಾಗಿ ಕಣ್ಮರೆಯಾಗಿರುವುದು ಇದೇ ಮೊದಲ ಬಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…