ದೇಶ- ವಿದೇಶ

ಜುಲೈ.3ರಿಂದ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಜುಲೈ.3ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ಅಮರನಾಥ ಯಾತ್ರೆಗೆ ಮುಂಚಿತವಾಗಿ, ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಿಆರ್‌ಪಿಎಫ್‌ ಎನ್‍ಹೆಚ್-44ರಲ್ಲಿ ಕಣ್ಗಾವಲು ಹೆಚ್ಚಿಸಿದೆ.

ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಸಿಆರ್‌ಪಿಎಫ್‌ ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ-9 ಶ್ವಾನ ದಳಗಳನ್ನು ಅದರ ಸಿಬ್ಬಂದಿಯೊಂದಿಗೆ ನಿಯೋಜಿಸಲಾಗಿದೆ.

ಉಧಮ್‍ಪುರ ವಲಯದಂತಹ ಸೂಕ್ಷ್ಮ ಪ್ರದೇಶಗಳ ಮೇಲೆ ವಿಶೇಷ ಗಮನಹರಿಸಿ ಹೆದ್ದಾರಿ ಗಸ್ತು ತಿರುಗುವಿಕೆಯನ್ನು ನಡೆಸಲಾಗುತ್ತಿದೆ. ಜುಲೈ.2ರಂದು ಶಿಬಿರದಿಂದ ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಹಸಿರು ನಿಶಾನೆ ತೋರಲಾಗುವುದು, ಆದರೆ ಜುಲೈ.3ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಅಧಿಕೃತವಾಗಿ ಪ್ರಾರಂಭವಾಗಲಿದೆ.

ಜುಲೈ 1 ರಿಂದ ಆಫ್‍ಲೈನ್ ನೋಂದಣಿ ಆರಂಭವಾಗಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಯಾತ್ರಿಕರು ಒಂದು ದಿನ ಮೊದಲು ಭಗವತಿ ನಗರ ಯಾತ್ರಾ ಮೂಲ ಶಿಬಿರವನ್ನು ತಲುಪುತ್ತಾರೆ, ಮರುದಿನ ಬಾಲ್ಟಾಲ್, ಪಹಲ್ಗಾಮ್ ಮೂಲಶಿಬಿರಕ್ಕೆ ಹೊರಡುತ್ತಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

1 hour ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

1 hour ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

2 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

2 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

2 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

3 hours ago