ಶ್ರೀನಗರ: ಪ್ರಸಿದ್ಧ ಯಾತ್ರಾಸ್ಥಳ ಅಮರನಾಥ ಯಾತ್ರೆಗೆ ಜಮ್ಮು-ಕಾಶ್ಮೀರ ಸರ್ಕಾರ ಬಿಗಿ ಭದ್ರತೆಗಳನ್ನು ಕಲ್ಪಿಸಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಮರನಾಥ ಯಾತ್ರಾ ಮಾರ್ಗಗಳು ಹಾರಾಟ ನಿಷೇಧ ವಲಯ ಎಂದು ಘೋಷಣೆ ಮಾಡಿದೆ.
ಯಾತ್ರೆಗೆ ತೆರಳಲು ಎರಡು ಮಾರ್ಗಗಳಿದ್ದು, ಒಂದು ಪಹಲ್ಗಾಮ್ ಮಾರ್ಗ. ಮತ್ತೊಂದು ಬಾಲ್ಟಾಲ್ ಮಾರ್ಗ. ಈಗ ಎರಡೂ ಮಾರ್ಗಗಳಲ್ಲೂ ಹಾರಾಟ ನಿಷೇಧ ವಲಯ ಎಂದು ಘೋಷಣೆ ಮಾಡಲಾಗಿದೆ.
ಈ ಎರಡೂ ಮಾರ್ಗಗಳಲ್ಲೂ ಮಾನವರಹಿತ ವೈಮಾನಿಕ ವಾಹನ, ಡ್ರೋನ್ಗಳು, ಬಲೂನ್ಗಳು ಸೇರಿದಂತೆ ಯಾವುದೇ ರೀತಿಯ ವಾಯುಯಾನ ಸಾಧನಗಳನ್ನು ಹಾರಿಸುವುದನ್ನು ನಿಷೇಧಿಸಲಾಗಿದೆ.
ಇನ್ನು ಈ ಆದೇಶ ಜುಲೈ.1ರಿಂದ ಆಗಸ್ಟ್.10ರವರೆಗೂ ಇರಲಿದೆ ಎಂದು ಜಮ್ಮು-ಕಾಶ್ಮೀರ ಗೃಹ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…