ಶ್ರೀನಗರ: ಪ್ರಸಿದ್ಧ ಯಾತ್ರಾಸ್ಥಳ ಅಮರನಾಥ ಯಾತ್ರೆಗೆ ಜಮ್ಮು-ಕಾಶ್ಮೀರ ಸರ್ಕಾರ ಬಿಗಿ ಭದ್ರತೆಗಳನ್ನು ಕಲ್ಪಿಸಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಮರನಾಥ ಯಾತ್ರಾ ಮಾರ್ಗಗಳು ಹಾರಾಟ ನಿಷೇಧ ವಲಯ ಎಂದು ಘೋಷಣೆ ಮಾಡಿದೆ.
ಯಾತ್ರೆಗೆ ತೆರಳಲು ಎರಡು ಮಾರ್ಗಗಳಿದ್ದು, ಒಂದು ಪಹಲ್ಗಾಮ್ ಮಾರ್ಗ. ಮತ್ತೊಂದು ಬಾಲ್ಟಾಲ್ ಮಾರ್ಗ. ಈಗ ಎರಡೂ ಮಾರ್ಗಗಳಲ್ಲೂ ಹಾರಾಟ ನಿಷೇಧ ವಲಯ ಎಂದು ಘೋಷಣೆ ಮಾಡಲಾಗಿದೆ.
ಈ ಎರಡೂ ಮಾರ್ಗಗಳಲ್ಲೂ ಮಾನವರಹಿತ ವೈಮಾನಿಕ ವಾಹನ, ಡ್ರೋನ್ಗಳು, ಬಲೂನ್ಗಳು ಸೇರಿದಂತೆ ಯಾವುದೇ ರೀತಿಯ ವಾಯುಯಾನ ಸಾಧನಗಳನ್ನು ಹಾರಿಸುವುದನ್ನು ನಿಷೇಧಿಸಲಾಗಿದೆ.
ಇನ್ನು ಈ ಆದೇಶ ಜುಲೈ.1ರಿಂದ ಆಗಸ್ಟ್.10ರವರೆಗೂ ಇರಲಿದೆ ಎಂದು ಜಮ್ಮು-ಕಾಶ್ಮೀರ ಗೃಹ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…