ದೇಶ- ವಿದೇಶ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಮಹಾನ್‌ ವ್ಯಕ್ತಿ: ಅಮರ್ತ್ಯ ಸೇನ್‌

ಪಶ್ಚಿಮ ಬಂಗಾಳ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಉತ್ತಮ ರಾಜಕೀಯ ನಾಯಕ ಮತ್ತು ಮಹಾನ್‌ ವ್ಯಕ್ತಿ. ಅವರು ಜಗತ್ತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್‌ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನಮೋಹನ ಸಿಂಗ್‌ ಹಾಗೂ ನಾನು ಕೇಂಬ್ರಿಡ್ಜ್‌ ವಿಶ್ವವಿದ್ಯಾನಿಲಯದಲ್ಲಿ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುವುದರರೊಂದಿಗೆ ಉತ್ತಮ ಸ್ನೇಹಿತರಾಗಿದ್ದೆವು. ಸಿಂಗ್‌ ಅವರು ತಮ್ಮ ಜೀವನದಲ್ಲಿ ವಜ್ರಚ್ಛೇದಿಕ ಪ್ರಜ್ಞಾ ಪರಮಿತಾ ಸೂತ್ರದಲ್ಲಿ ಗೌತಮ ಬುದ್ಧ ವಿವರಿಸಿದ ಸಂದೇಶದ ಸಾರವನ್ನು ಅಳವಡಿಸಿಕೊಂಡಿದ್ದರು ಎಂದು ಹೇಳಿದರು.

ಸಿಂಗ್‌ ಅವರು ಮತ್ತು ನಾನು ಒಟ್ಟಿಗೆ ವಿದ್ಯಾರ್ಥಿಗಳಾಗಿದ್ದಾಗ ಮತ್ತು ದೆಹಲಿ ಸ್ಕೂಳ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಸಹದ್ಯೋಗಿಗಳಾಗಿದ್ದಾಗ ನಾನು ಅವರೊಡನೆ ಸುದೀರ್ಘ ಮಾತುಕತೆ ನಡೆಸಿದ್ದೇನೆ. ಆ ವೇಳೆ ಅವರು ಗೌತಮ ಬುದ್ಧನ ವಜ್ರಚ್ಛೇದಿಕ ಪ್ರಜ್ಞಾಪರಮಿತಾ ಸೂತ್ರ ಅಥವಾ ವಜ್ರ ಸೂತ್ರದಲ್ಲಿ ಮುನಷ್ಯರ ವಿಭಿನ್ನ ನಂಬಿಕೆಗಳ ಅಸ್ತಿತ್ವವನ್ನು ಗುರುತಿಸುವುದು ಮುಖ್ಯ ಎಂಬ ಸಂದೇಶವನ್ನು ಅರ್ಥೈಸಿಕೊಂಡಿದ್ದರು. ಅಲ್ಲದೇ ಈ ದೇಶದ ನೆಲದಲ್ಲಿ ಪಾಕಿಸ್ತಾನ ಭಯೋತ್ಪಾದನೆಯ ಪುರಾವೆಗಳು ಕಂಡುಬಂದಾಗ ಪ್ರಜ್ಞಾ ಪೂರ್ವಕವಾಗಿ ಪ್ರತಿಕ್ರಿಯಿಸಬಹುದಿತ್ತು. ಆದರೆ ಅವರು ಹಾಗೇ ಮಾಡಲಿಲ್ಲ, ಏಕೆಂದರೆ ಅವರಿಗೆ ವಜ್ರ ಸೂತ್ರದಲ್ಲಿ ವಿವರಿಸಲಾದ ಗೌತಮ ಬುದ್ಧನ ಸಂದೇಶವನ್ನು ಅರ್ಥೈಸಿಕೊಂಡಿದ್ದರು ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಮನಮೋಹನ ಸಿಂಗ್‌ ಅವರು ಸಿಖ್‌ ಸಮುದಾಯಕ್ಕೆ ಸೇರಿದವರಾಗಿದ್ದರೂ ಕೂಡ ಗೌತಮ ಬುದ್ಧನ ಸಂದೇಶವನ್ನು ಹಾಗೂ ಇತರ ಧರ್ಮಗಳನ್ನು ಬೇರೆ ಸಮುದಾಯಗಳ ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಹೀಗಾಗಿ ನಾನು, ಸಿಂಗ್‌ ಅವರನ್ನು ತುಂಬಾ ಇಷ್ಟಪಟ್ಟಿದ್ದೇನೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago