ದೇಶ- ವಿದೇಶ

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧ ಬಲವಾದ ಪ್ರತಿದಾಳಿ ನಡೆಸುತ್ತಿದೆ.

ಈ ಹಿನ್ನಲೆ ಯುದ್ಧದ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದು, ಈಗ ಅಮೆರಿಕ ತನ್ನ ಮಿಲಿಟರಿ ಕಾರ್ಯತಂತ್ರವನ್ನು ಹೆಚ್ಚು ಆಕ್ರಮಣಕಾರಿಯನ್ನಾಗಿ ಮಾಡಿಕೊಳ್ಳುತ್ತಿದೆ.

ಭೂ ದಾಳಿ, ವಾಯು ದಾಳಿ ಹಾಗೂ ಸಮುದ್ರ ದಾಳಿಗೂ ಸಿದ್ಧವಾಗಿರುವ ಅಮೆರಿಕ, ಇದರ ಭಾಗವಾಗಿ ಅಮೆರಿಕ ತನ್ನ ಬೃಹತ್‌ ಯುದ್ಧನೌಕೆ ಯುಎಸ್‌ಎಸ್‌ ಟ್ರಿಪೋಲಿಯನ್ನು ನಿಯೋಜಿಸಿದೆ.

ಹೀಗೆ ಇರಾನ್‌ ಮೇಲಿನ ದಾಳಿಗೆ ಅಮೆರಿಕ ಬೃಹತ್‌ ಯುದ್ಧನೌಕೆ ಯುಎಸ್‌ಎಸ್‌ ಟ್ರಿಪೋಲಿಯನ್ನು ಸಹ ನಿಯೋಜಿಸಿದೆ. ಸುಮಾರು 3,500 ನೌಕಾಪಡೆಗಳೊಂದಿಗೆ ಯುಎಸ್‌ ಸೆಂಟ್ರಲ್‌ ಕಮಾಂಡ್‌ ಪ್ರದೇಶಕ್ಕೆ ಆಗಮಿಸಿದೆ.

ಜತೆಗೆ ಇರಾನ್‌ ಮೇಲಿನ ಭೂದಾಳಿಗೂ ಅಮೆರಿಕದ ಭೂ ಸೇನೆಯ 17 ಸಾವಿರ ತುಕಡಿಗಳು ಸಜ್ಜಾಗಿವೆ. ಅಮೆರಿಕ ಅಧ್ಯಕ್ಷರ ಅಂತಿಮ ಅನುಮೋದನೆಗೆ ಕಾಯುತ್ತಿವೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

ಪ್ರಬಲ ಭೂ ಸೇನೆ ಹೊಂದಿರುವ ಇರಾನ್‌ ವಿರುದ್ಧ ಭೂದಾಳಿ ಅಪಾಯಕಾರಿ ಎಂಬುದು ಟ್ರಂಪ್‌ ಆಡಳಿತಕ್ಕೆ ಅರಿವಿದೆ. 6 ಲಕ್ಷ ಯೋಧರು, 3.50 ಲಕ್ಷ ಸೇನಾ ತುಕಡಿಗಳು, 1.90 ಲಕ್ಷ ಐಆರ್‌ಜಿಸಿ ಯೋಧರ ಪಡೆ ಹೊಂದಿರುವ ಇರಾನ್‌, ಭೂದಾಳಿಗೆ ಪ್ರಬಲ ಪ್ರತಿರೋಧ ತೋರುವ ಸಾಧ್ಯತೆಗಳಿವೆ.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

4 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

6 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

7 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

9 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

10 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

11 hours ago