ದೇಶ- ವಿದೇಶ

ಭಾರತಕ್ಕೂ ತೆರಿಗೆ ಶಾಕ್‌ ನೀಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಅಮೆರಿಕಾ ಅಧ್ಯಕ್ಷ ಟೊನಾಲ್ಡ್‌ ಟ್ರಂಪ್‌ ಬೀಸಿದ ಸುಂಕಾಸ್ತ್ರ ಈಗ ಭಾರತದ ಬುಡಕ್ಕೂ ಬಂದಿದೆ.

ಎರಡನೇ ಬಾರಿಗೆ ಅಮೆರಿಕಾ ಅಧ್ಯಕ್ಷರಾದ ನಂತರ ಡೊನಾಲ್ಡ್‌ ಟ್ರಂಪ್‌ ಇದೇ ಮೊದಲ ಬಾರಿಗೆ ಅಮೆರಿಕಾ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು.

ಭಾರತ ನಮ್ಮ ಉತ್ಪನ್ನಗಳ ಮೇಲೆ 100% ಹೆಚ್ಚು ಆಟೋ ಟ್ಯಾರೀಫ್‌ ವಿಧಿಸುತ್ತಿದೆ. ಸದ್ಯದ ವ್ಯವಸ್ಥೆಯಿಂದ ಅಮೆರಿಕಾಗೆ ನ್ಯಾಯ ಸಿಗುತ್ತಿಲ್ಲ. ಅದಕ್ಕೆ ಏಪ್ರಿಲ್.‌2ರಿಂದ ಆಯಾಯ ದೇಶಗಳ ಮೇಲೆ ನಾವು ಪ್ರತಿ ಸುಂಕ ವಿಧಿಸುತ್ತೇವೆ. ಅವರು ಎಷ್ಟು ಸುಂಕ ವಿಧಿಸುತ್ತಾರೋ ನಾವು ಅಷ್ಟೇ ವಿಧಿಸುತ್ತೇವೆ. ಇದರಿಂದ ಅಮೆರಿಕಾ ಮತ್ತಷ್ಟು ಶ್ರೀಮಂತ ಆಗಲಿದೆ ಎಂದು ಗುಡುಗಿದರು.

ಇನ್ನು ಅಮೆರಿಕಾದ ಸುಂಕಾಸ್ತ್ರಕ್ಕೆ ಚೀನಾ ಗರಂ ಆಗಿದೆ. ನಿಮಗೆ ಯುದ್ಧವೇ ಬೇಕು ಎಂದರೆ ನಾವು ಸಿದ್ಧವಿದ್ದೇವೆ. ಕೊನೆಯವರೆಗೂ ಹೋರಾಡುತ್ತೇವೆ ಎಂದು ಚೀನಾ ಘೋಷಣೆ ಮಾಡಿದೆ.

ಇನ್ನು ಕೆನಡಾ ಸಹ ಅಮೆರಿಕಾದಿಂದ ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ ವಿಧಿಸುವುದಾಗಿ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೇ ಮಸ್ಕ್‌ ನೇತೃತ್ವದ ಸ್ಟಾರ್‌ಲಿಂಗ್‌ ಜೊತೆಗಿನ ಒಪ್ಪಂದವನ್ನು ಸಹ ರದ್ದು ಮಾಡಿಕೊಂಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

1 hour ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

1 hour ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

1 hour ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

1 hour ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago