ದೇಶ- ವಿದೇಶ

ಎರಡನೇ ವಿಶ್ವಯುದ್ಧದಲ್ಲಿ ಎಸೆದಿದ್ದ ಅಮೆರಿಕಾ ಬಾಂಬ್‌ ಜಪಾನ್‌ನಲ್ಲಿ ಈಗ ಸ್ಫೋಟ..!

ಟೊಕಿಯೊ: ಎರಡನೇ ವಿಶ್ವಯುದ್ಧದಲ್ಲಿ ಸಮಯದಲ್ಲಿ ಸ್ಪೋಟಗೊಳ್ಳದೆ ಭೂಮಿಯಲ್ಲಿ ಅಡಗಿಹೋಗಿದ್ದ ಬಾಂಬ್‌ವೊಂದು ಈಗ ಸ್ಫೋಟಗೊಂಡಿರುವ ಘಟನೆ ಬುಧವಾರ ಜಪಾನಿನ ವಿಮಾನ ನಿಲ್ದಾಣದ ಸಮೀಪ ಜರುಗಿದೆ.

ಅದೃಷ್ಟವಶಾತ್‌ ಯಾರೊಬ್ಬರಿಗೂ ಹಾನಿಯಾಗಿಲ್ಲ. ಟ್ಯಾಕ್ಸಿ ನಿಲುಗಡೆ ಸ್ಥಳವು ಹಾನಿಗೊಳಗಾಗಿದೆ ಹಾಗೂ 80ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜಾಗತಿಕ ಯುದ್ಧವಾದ ಎರಡನೇ ವಿಶ್ವಯುದ್ಧದ ಸಮಯದಲ್ಲಿ ಅಮೆರಿಕಾ ಜಪಾನ್‌ ಮೇಲೆ ದಾಳಿ ಮಾಡಿದಾಗ ಅಮೆರಿಕಾವು ಬಾಂಬ್‌ಗಳನ್ನು ಎಸೆದಿತ್ತು. ಅಂದು ಎಸೆದ ಕೆಲವು ಬಾಂಬ್‌ಗಳು ಸ್ಫೋಟಗೊಳ್ಳದೆ ಭೂಮಿಯಲ್ಲಿ ಹುದುಗಿ ಹೋಗಿದ್ದವು. ಅಂದಿನ ಅಮೆರಿಕಾದ ಬಾಂಬ್‌ ಜಪಾನ್‌ನ ವಿಮಾನ ನಿಲ್ದಾಣದಲ್ಲಿ ಇಂದು ಸ್ಫೋಟಗೊಂಡಿದೆ. ಆದರೆ, ತತ್‌ಕ್ಷಣ ಸ್ಫೋಟಕ್ಕೆ ಕಾರಣ ಏನೆಂದು ಪತ್ತೆ ಮಾಡಲಾಗುತ್ತಿದೆ ಎಂದು ಸ್ವಯಂ ರಕ್ಷಣಾ ದಳ ಮತ್ತು ಪೊಲೀಸರು ತನಿಖೆಯು ಹೇಳಿದೆ ಎಂದರು.

500ಪೌಂಡ್‌ ಅಮೆರಿಕಾ ಬಾಂಬ್‌ನಿಂದ ಸ್ಫೋಟ ಸಂಭವಿಸಿದೆ. ನೈಋತ್ಯ ಜಪಾನ್‌ನ ಮಿಯಾಜಾಕಿ ವಿಮಾನ ನಿಲ್ದಾಣದಲ್ಲಿ ಈ ಸ್ಪೋಟ ಸಂಭವಿಸಿದೆ. ಅದೃಷ್ಟವಶಾತ್‌ ಸ್ಫೋಟದ ಸಮೀಪ ಯಾವುದೇ ವಿಮಾನ ಇರಲಿಲ್ಲ ಎಂದು ತಿಳಿಸಿದರು.

ವಿಮಾನ ಹಾರಾಟವು ಗುರುವಾರ ಬೆಳಿಗ್ಗೆಯಿಂದ ಮರು ಆರಂಭವಾಗಲಿದೆ ಎಂದು ಸಂಪುಟದ ಮುಖ್ಯ ಕಾರ್ಯದರ್ಶಿ ಯೋಶಿಮಾಸ ಹಯಾಶಿ ಹೇಳಿದ್ದಾರೆ.

ಅಂದಿನ ವಿಶ್ವಯುದ್ದದಲ್ಲಿ ಅಮೆರಿಕ ಸೇನೆ ಎಸೆದಿದ್ದ ಅನೇಕ ಬಾಂಬ್‌ಗಳು ಸ್ಫೋಟಗೊಳ್ಳದೆ ಜಪಾನ್‌ನ ಭೂಮಿಯಲ್ಲಿ ಅಡಗಿವೆ ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

10 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

28 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

51 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago