ದೇಶ- ವಿದೇಶ

ಎರಡನೇ ವಿಶ್ವಯುದ್ಧದಲ್ಲಿ ಎಸೆದಿದ್ದ ಅಮೆರಿಕಾ ಬಾಂಬ್‌ ಜಪಾನ್‌ನಲ್ಲಿ ಈಗ ಸ್ಫೋಟ..!

ಟೊಕಿಯೊ: ಎರಡನೇ ವಿಶ್ವಯುದ್ಧದಲ್ಲಿ ಸಮಯದಲ್ಲಿ ಸ್ಪೋಟಗೊಳ್ಳದೆ ಭೂಮಿಯಲ್ಲಿ ಅಡಗಿಹೋಗಿದ್ದ ಬಾಂಬ್‌ವೊಂದು ಈಗ ಸ್ಫೋಟಗೊಂಡಿರುವ ಘಟನೆ ಬುಧವಾರ ಜಪಾನಿನ ವಿಮಾನ ನಿಲ್ದಾಣದ ಸಮೀಪ ಜರುಗಿದೆ.

ಅದೃಷ್ಟವಶಾತ್‌ ಯಾರೊಬ್ಬರಿಗೂ ಹಾನಿಯಾಗಿಲ್ಲ. ಟ್ಯಾಕ್ಸಿ ನಿಲುಗಡೆ ಸ್ಥಳವು ಹಾನಿಗೊಳಗಾಗಿದೆ ಹಾಗೂ 80ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜಾಗತಿಕ ಯುದ್ಧವಾದ ಎರಡನೇ ವಿಶ್ವಯುದ್ಧದ ಸಮಯದಲ್ಲಿ ಅಮೆರಿಕಾ ಜಪಾನ್‌ ಮೇಲೆ ದಾಳಿ ಮಾಡಿದಾಗ ಅಮೆರಿಕಾವು ಬಾಂಬ್‌ಗಳನ್ನು ಎಸೆದಿತ್ತು. ಅಂದು ಎಸೆದ ಕೆಲವು ಬಾಂಬ್‌ಗಳು ಸ್ಫೋಟಗೊಳ್ಳದೆ ಭೂಮಿಯಲ್ಲಿ ಹುದುಗಿ ಹೋಗಿದ್ದವು. ಅಂದಿನ ಅಮೆರಿಕಾದ ಬಾಂಬ್‌ ಜಪಾನ್‌ನ ವಿಮಾನ ನಿಲ್ದಾಣದಲ್ಲಿ ಇಂದು ಸ್ಫೋಟಗೊಂಡಿದೆ. ಆದರೆ, ತತ್‌ಕ್ಷಣ ಸ್ಫೋಟಕ್ಕೆ ಕಾರಣ ಏನೆಂದು ಪತ್ತೆ ಮಾಡಲಾಗುತ್ತಿದೆ ಎಂದು ಸ್ವಯಂ ರಕ್ಷಣಾ ದಳ ಮತ್ತು ಪೊಲೀಸರು ತನಿಖೆಯು ಹೇಳಿದೆ ಎಂದರು.

500ಪೌಂಡ್‌ ಅಮೆರಿಕಾ ಬಾಂಬ್‌ನಿಂದ ಸ್ಫೋಟ ಸಂಭವಿಸಿದೆ. ನೈಋತ್ಯ ಜಪಾನ್‌ನ ಮಿಯಾಜಾಕಿ ವಿಮಾನ ನಿಲ್ದಾಣದಲ್ಲಿ ಈ ಸ್ಪೋಟ ಸಂಭವಿಸಿದೆ. ಅದೃಷ್ಟವಶಾತ್‌ ಸ್ಫೋಟದ ಸಮೀಪ ಯಾವುದೇ ವಿಮಾನ ಇರಲಿಲ್ಲ ಎಂದು ತಿಳಿಸಿದರು.

ವಿಮಾನ ಹಾರಾಟವು ಗುರುವಾರ ಬೆಳಿಗ್ಗೆಯಿಂದ ಮರು ಆರಂಭವಾಗಲಿದೆ ಎಂದು ಸಂಪುಟದ ಮುಖ್ಯ ಕಾರ್ಯದರ್ಶಿ ಯೋಶಿಮಾಸ ಹಯಾಶಿ ಹೇಳಿದ್ದಾರೆ.

ಅಂದಿನ ವಿಶ್ವಯುದ್ದದಲ್ಲಿ ಅಮೆರಿಕ ಸೇನೆ ಎಸೆದಿದ್ದ ಅನೇಕ ಬಾಂಬ್‌ಗಳು ಸ್ಫೋಟಗೊಳ್ಳದೆ ಜಪಾನ್‌ನ ಭೂಮಿಯಲ್ಲಿ ಅಡಗಿವೆ ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

12 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

12 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

12 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

13 hours ago