ದೇಶ- ವಿದೇಶ

ಎರಡನೇ ವಿಶ್ವಯುದ್ಧದಲ್ಲಿ ಎಸೆದಿದ್ದ ಅಮೆರಿಕಾ ಬಾಂಬ್‌ ಜಪಾನ್‌ನಲ್ಲಿ ಈಗ ಸ್ಫೋಟ..!

ಟೊಕಿಯೊ: ಎರಡನೇ ವಿಶ್ವಯುದ್ಧದಲ್ಲಿ ಸಮಯದಲ್ಲಿ ಸ್ಪೋಟಗೊಳ್ಳದೆ ಭೂಮಿಯಲ್ಲಿ ಅಡಗಿಹೋಗಿದ್ದ ಬಾಂಬ್‌ವೊಂದು ಈಗ ಸ್ಫೋಟಗೊಂಡಿರುವ ಘಟನೆ ಬುಧವಾರ ಜಪಾನಿನ ವಿಮಾನ ನಿಲ್ದಾಣದ ಸಮೀಪ ಜರುಗಿದೆ.

ಅದೃಷ್ಟವಶಾತ್‌ ಯಾರೊಬ್ಬರಿಗೂ ಹಾನಿಯಾಗಿಲ್ಲ. ಟ್ಯಾಕ್ಸಿ ನಿಲುಗಡೆ ಸ್ಥಳವು ಹಾನಿಗೊಳಗಾಗಿದೆ ಹಾಗೂ 80ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜಾಗತಿಕ ಯುದ್ಧವಾದ ಎರಡನೇ ವಿಶ್ವಯುದ್ಧದ ಸಮಯದಲ್ಲಿ ಅಮೆರಿಕಾ ಜಪಾನ್‌ ಮೇಲೆ ದಾಳಿ ಮಾಡಿದಾಗ ಅಮೆರಿಕಾವು ಬಾಂಬ್‌ಗಳನ್ನು ಎಸೆದಿತ್ತು. ಅಂದು ಎಸೆದ ಕೆಲವು ಬಾಂಬ್‌ಗಳು ಸ್ಫೋಟಗೊಳ್ಳದೆ ಭೂಮಿಯಲ್ಲಿ ಹುದುಗಿ ಹೋಗಿದ್ದವು. ಅಂದಿನ ಅಮೆರಿಕಾದ ಬಾಂಬ್‌ ಜಪಾನ್‌ನ ವಿಮಾನ ನಿಲ್ದಾಣದಲ್ಲಿ ಇಂದು ಸ್ಫೋಟಗೊಂಡಿದೆ. ಆದರೆ, ತತ್‌ಕ್ಷಣ ಸ್ಫೋಟಕ್ಕೆ ಕಾರಣ ಏನೆಂದು ಪತ್ತೆ ಮಾಡಲಾಗುತ್ತಿದೆ ಎಂದು ಸ್ವಯಂ ರಕ್ಷಣಾ ದಳ ಮತ್ತು ಪೊಲೀಸರು ತನಿಖೆಯು ಹೇಳಿದೆ ಎಂದರು.

500ಪೌಂಡ್‌ ಅಮೆರಿಕಾ ಬಾಂಬ್‌ನಿಂದ ಸ್ಫೋಟ ಸಂಭವಿಸಿದೆ. ನೈಋತ್ಯ ಜಪಾನ್‌ನ ಮಿಯಾಜಾಕಿ ವಿಮಾನ ನಿಲ್ದಾಣದಲ್ಲಿ ಈ ಸ್ಪೋಟ ಸಂಭವಿಸಿದೆ. ಅದೃಷ್ಟವಶಾತ್‌ ಸ್ಫೋಟದ ಸಮೀಪ ಯಾವುದೇ ವಿಮಾನ ಇರಲಿಲ್ಲ ಎಂದು ತಿಳಿಸಿದರು.

ವಿಮಾನ ಹಾರಾಟವು ಗುರುವಾರ ಬೆಳಿಗ್ಗೆಯಿಂದ ಮರು ಆರಂಭವಾಗಲಿದೆ ಎಂದು ಸಂಪುಟದ ಮುಖ್ಯ ಕಾರ್ಯದರ್ಶಿ ಯೋಶಿಮಾಸ ಹಯಾಶಿ ಹೇಳಿದ್ದಾರೆ.

ಅಂದಿನ ವಿಶ್ವಯುದ್ದದಲ್ಲಿ ಅಮೆರಿಕ ಸೇನೆ ಎಸೆದಿದ್ದ ಅನೇಕ ಬಾಂಬ್‌ಗಳು ಸ್ಫೋಟಗೊಳ್ಳದೆ ಜಪಾನ್‌ನ ಭೂಮಿಯಲ್ಲಿ ಅಡಗಿವೆ ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

12 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

16 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

22 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

29 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

35 mins ago