ದೇಶ- ವಿದೇಶ

ಎರಡನೇ ವಿಶ್ವಯುದ್ಧದಲ್ಲಿ ಎಸೆದಿದ್ದ ಅಮೆರಿಕಾ ಬಾಂಬ್‌ ಜಪಾನ್‌ನಲ್ಲಿ ಈಗ ಸ್ಫೋಟ..!

ಟೊಕಿಯೊ: ಎರಡನೇ ವಿಶ್ವಯುದ್ಧದಲ್ಲಿ ಸಮಯದಲ್ಲಿ ಸ್ಪೋಟಗೊಳ್ಳದೆ ಭೂಮಿಯಲ್ಲಿ ಅಡಗಿಹೋಗಿದ್ದ ಬಾಂಬ್‌ವೊಂದು ಈಗ ಸ್ಫೋಟಗೊಂಡಿರುವ ಘಟನೆ ಬುಧವಾರ ಜಪಾನಿನ ವಿಮಾನ ನಿಲ್ದಾಣದ ಸಮೀಪ ಜರುಗಿದೆ.

ಅದೃಷ್ಟವಶಾತ್‌ ಯಾರೊಬ್ಬರಿಗೂ ಹಾನಿಯಾಗಿಲ್ಲ. ಟ್ಯಾಕ್ಸಿ ನಿಲುಗಡೆ ಸ್ಥಳವು ಹಾನಿಗೊಳಗಾಗಿದೆ ಹಾಗೂ 80ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜಾಗತಿಕ ಯುದ್ಧವಾದ ಎರಡನೇ ವಿಶ್ವಯುದ್ಧದ ಸಮಯದಲ್ಲಿ ಅಮೆರಿಕಾ ಜಪಾನ್‌ ಮೇಲೆ ದಾಳಿ ಮಾಡಿದಾಗ ಅಮೆರಿಕಾವು ಬಾಂಬ್‌ಗಳನ್ನು ಎಸೆದಿತ್ತು. ಅಂದು ಎಸೆದ ಕೆಲವು ಬಾಂಬ್‌ಗಳು ಸ್ಫೋಟಗೊಳ್ಳದೆ ಭೂಮಿಯಲ್ಲಿ ಹುದುಗಿ ಹೋಗಿದ್ದವು. ಅಂದಿನ ಅಮೆರಿಕಾದ ಬಾಂಬ್‌ ಜಪಾನ್‌ನ ವಿಮಾನ ನಿಲ್ದಾಣದಲ್ಲಿ ಇಂದು ಸ್ಫೋಟಗೊಂಡಿದೆ. ಆದರೆ, ತತ್‌ಕ್ಷಣ ಸ್ಫೋಟಕ್ಕೆ ಕಾರಣ ಏನೆಂದು ಪತ್ತೆ ಮಾಡಲಾಗುತ್ತಿದೆ ಎಂದು ಸ್ವಯಂ ರಕ್ಷಣಾ ದಳ ಮತ್ತು ಪೊಲೀಸರು ತನಿಖೆಯು ಹೇಳಿದೆ ಎಂದರು.

500ಪೌಂಡ್‌ ಅಮೆರಿಕಾ ಬಾಂಬ್‌ನಿಂದ ಸ್ಫೋಟ ಸಂಭವಿಸಿದೆ. ನೈಋತ್ಯ ಜಪಾನ್‌ನ ಮಿಯಾಜಾಕಿ ವಿಮಾನ ನಿಲ್ದಾಣದಲ್ಲಿ ಈ ಸ್ಪೋಟ ಸಂಭವಿಸಿದೆ. ಅದೃಷ್ಟವಶಾತ್‌ ಸ್ಫೋಟದ ಸಮೀಪ ಯಾವುದೇ ವಿಮಾನ ಇರಲಿಲ್ಲ ಎಂದು ತಿಳಿಸಿದರು.

ವಿಮಾನ ಹಾರಾಟವು ಗುರುವಾರ ಬೆಳಿಗ್ಗೆಯಿಂದ ಮರು ಆರಂಭವಾಗಲಿದೆ ಎಂದು ಸಂಪುಟದ ಮುಖ್ಯ ಕಾರ್ಯದರ್ಶಿ ಯೋಶಿಮಾಸ ಹಯಾಶಿ ಹೇಳಿದ್ದಾರೆ.

ಅಂದಿನ ವಿಶ್ವಯುದ್ದದಲ್ಲಿ ಅಮೆರಿಕ ಸೇನೆ ಎಸೆದಿದ್ದ ಅನೇಕ ಬಾಂಬ್‌ಗಳು ಸ್ಫೋಟಗೊಳ್ಳದೆ ಜಪಾನ್‌ನ ಭೂಮಿಯಲ್ಲಿ ಅಡಗಿವೆ ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

7 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

10 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

10 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

14 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

19 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

19 hours ago